Party Rounds: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ: 5 ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್

Party Rounds: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ: 5 ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್

Published : May 01, 2023, 08:42 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. 

ಬೆಂಗಳೂರು (ಮೇ.01): ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

16 ಭರವಸೆಗಳ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಬಿಜೆಪಿಯ ಭರವಸೆಗಳು ಇಂತಿದೆ: 
* ಬಿಪಿಎಲ್ ಕುಟುಂಬಕ್ಕೆ ಯುಗಾದಿ, ದೀಪಾವಳಿ, ಗಣೇಶ ಹಬ್ಬಕ್ಕೆ 3 ಫ್ರೀ ಸಿಲಿಂಡರ್.
* ಪೋಷಣಾ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಅರ್ಧ ಲೀ. ನಂದಿನಿ ಹಾಲು.
* ಪ್ರತೀ ಕುಟುಂಬಕ್ಕೆ ಪಡಿತರದಲ್ಲಿ 5 ಕೆಜಿ ಸಿರಿಧಾನ್ಯ.
* ಎಸ್‌ಸಿ ಎಸ್‌ಟಿ ಮಹಿಳೆಯರಿಗೆ 5 ವರ್ಷಕ್ಕೆ 10 ಸಾವಿರ ಠೇವಣಿ.
* ಪ್ರತೀ ಮಹಾನಗರ ಪಾಲಿಕೆ ವಾರ್ಡ್‌ನಲ್ಲಿ ಅಟಲ್ ಆಹಾರ ಕೇಂದ್ರ.
* ವಿಶ್ವೇಶ್ವರಯ್ಯ ವಿದ್ಯಾಯೋಜನೆಯಡಿ ಸರ್ಕಾರಿ ಶಾಲೆಗಳ ಉನ್ನತೀಕರಣ.
* ಐಎಎಸ್‌ ಕೆಎಎಸ್‌ ಅಭ್ಯರ್ಥಿಗಳಿಗೆ ಆರ್ಥಿಕ ನೆರವು.
* ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತನೆ.
* ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ.
* ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ಸೌಲಭ್ಯ.
* ಸಮನ್ವಯ ಯೋಜನೆಯಡಿ ಸಣ್ಣ ಕೈಗಾರಿಗಳಲ್ಲಿ ಉದ್ಯೋಗಕ್ಕಾಗಿ ಒಡಂಬಡಿಕೆ.
* ಮಿಷನ್ ಸ್ವಾಸ್ಠ್ಯ ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ.
* ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು 1,500 ಕೋಟಿ ವಿನಿಯೋಗ.
* ಕರ್ನಾಟಕ ಅಪಾರ್ಟ್ಮೆಂಟ್ ಕಾಯಿದೆ ತಿದ್ದುಪಡಿ.
* ಬೆಂಗಳೂರಿನ ಹೊರಗೆ ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗ  ಸೃಷ್ಟಿಸುವ ಹಬ್.
* ಮೂರು ಜಿಲ್ಲೆಗೆ ಮೆಟ್ರೋ ಸೌಲಭ್ಯ ವಿಸ್ತರಣೆ ಹುಬ್ಬಳ್ಳಿ-ಧಾರಾವಾಢ, ಬೆಳಗಾವಿ ಮತ್ತು ಮೈಸೂರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more