Party Rounds: ಬಿಜೆಪಿ ಕಾರ್ಯಕರ್ತರಿಗೆ ಬೂತ್‌ ಗೆಲ್ಲಲು ಪ್ರಧಾನಿ ಮೋದಿ ರಾಜಕೀಯ ಪಾಠ!

Party Rounds: ಬಿಜೆಪಿ ಕಾರ್ಯಕರ್ತರಿಗೆ ಬೂತ್‌ ಗೆಲ್ಲಲು ಪ್ರಧಾನಿ ಮೋದಿ ರಾಜಕೀಯ ಪಾಠ!

Published : Apr 27, 2023, 08:23 PM IST

ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ಗುರುವಾರ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಪ್ರತಿ ಬೂತ್‌ ಗೆದ್ದರೆ ಪಕ್ಷ ಗೆದ್ದಂತೆ, ಆದ್ದರಿಂದ ಪ್ರತಿ ಬೂತ್‌ ಗೆಲವಿಗೆ ಶ್ರಮ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರಿಗೆ ಕರೆ ನೀಡಿದರು.

ಬೆಂಗಳೂರು (ಏ.27): ಕಾಂಗ್ರೆಸ್‌ ಅಂದರೆ ಭ್ರಷ್ಟಾಚಾರ, ಸುಳ್ಳು, ಗ್ಯಾರಂಟಿ ರಹಿತ ಪಕ್ಷ, ಹಾಗಿರುವಾಗ ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯನ್ನು ಜನತೆ ನಂಬುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ಗುರುವಾರ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಪ್ರತಿ ಬೂತ್‌ ಗೆದ್ದರೆ ಪಕ್ಷ ಗೆದ್ದಂತೆ, ಆದ್ದರಿಂದ ಪ್ರತಿ ಬೂತ್‌ ಗೆಲವಿಗೆ ಶ್ರಮ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರಿಗೆ ಕರೆ ನೀಡಿದರು. 

ಪ್ರತಿ ಬೂತ್‌ನಲ್ಲಿ 10 ಪುರುಷರು ಹಾಗೂ 10 ಮಹಿಳಾ ಕಾರ್ಯಕರ್ತರ ತಂಡ ರಚಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲ ರೀತಿಯ ಅಭಿವೃದ್ಧಿ ಕೆಲಸಗಳ ಮಾಹಿತಿಯನ್ನು ಮೊಬೈಲ್‌ ಮತ್ತು ತಮ್ಮ ಡೈರಿಗಳಲ್ಲಿ ಸಿದ್ಧಪಡಿಸಿ ಪ್ರಚುರಪಡಿಸುವ ಬಗ್ಗೆ ರೂಪುರೇಷೆ ತಯಾರಿಸಬೇಕು. ಮನೆ ಮನೆ ಭೇಟಿ ವೇಳೆ ಮನೆಯ ಸದಸ್ಯರ ಕುಶಲೋಪರಿ ವಿಚಾರಿಸಿ ಮಕ್ಕಳ ಜತೆ ಮಾತನಾಡಬೇಕು. ನಂತರ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ಮಾಡಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more