News Hour: ಪೇಸಿಎಂ ಅಸ್ತ್ರಕ್ಕೆ ಬಿಜೆಪಿ ನಾಯಕರ ಜಾತಿ ಪ್ರತ್ಯಸ್ತ್ರ!

News Hour: ಪೇಸಿಎಂ ಅಸ್ತ್ರಕ್ಕೆ ಬಿಜೆಪಿ ನಾಯಕರ ಜಾತಿ ಪ್ರತ್ಯಸ್ತ್ರ!

Published : Sep 26, 2022, 11:46 PM ISTUpdated : Sep 26, 2022, 11:47 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಪೇಸಿಎಂ ಅಸ್ತ್ರಕ್ಕೆ ಬಿಜೆಪಿ, ಟಾರ್ಗೆಟ್‌ ಲಿಂಗಾಯತ ಸಿಎಂ ಪ್ರತ್ಯಸ್ತ್ರ ಹೂಡಿದೆ. ಪೇಸಿಎಂ ಮೂಲಕ ರಾಜ್ಯದಲ್ಲಿ ದೊಡ್ಡ ಸಮುದಾಯದ ನಾಯಕರೊಬ್ಬರನ್ನು ಕಾಂಗ್ರೆಸ್‌ ಪಕ್ಷ ಟಾರ್ಗೆಟ್‌ ಮಾಡುವ ತನ್ನ ಇತಿಹಾಸವನ್ನು ಮುಂದುವರಿಸಿದೆ ಎಂದು ಆರೋಪಿಸಿದೆ.

ಬೆಂಗಳೂರು (ಸೆ. 26): ಕಾಂಗ್ರೆಸ್‌ನ ಪೇಸಿಎಂ ಏಟಿನಿಂದ ಜರ್ಜರಿತವಾಗಿರುವ ರಾಜ್ಯ ಬಿಜೆಪಿ, ಈಗ ಜಾತಿ ಅಸ್ತ್ರವನ್ನು ತಂದು ಎದುರೇಟು ನೀಡಿದೆ. ಲಿಂಗಾಯತ ಸಿಎಂಗಳನ್ನೇ ಕಾಂಗ್ರೆಸ್‌ ಪಕ್ಷ ಈವರೆಗೂ ಟಾರ್ಗೆಟ್‌ ಮಾಡುತ್ತಿತ್ತು. ಈ ಬಾರಿ ಮತ್ತೊಮ್ಮೆ ಅದೇ ಕೆಲಸವನ್ನು ಪುನರಾವರ್ತನೆ ಮಾಡಿದೆ ಎಂಟು ಟೀಕಿಸಿದೆ.

ಈ ಕುರಿತಾಗಿ ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್‌, ನಾನು ತುಂಬಾ ಇತಿಹಾಸಕ್ಕೆ ಹೋಗಲು ಬಯಸೋದಿಲ್ಲ. ವೀರೇಂದ್ರ ಪಾಟೀಲ್‌ ಅವರಿಗೆ, ಎಸ್‌ಎಂ ಕೃಷ್ಣ ಅವರಿಗೆ ಕೊನೆಗೆ ನಮ್ಮ ಯಡಿಯೂರಪ್ಪ ಅವರಿಗೆ ಕಾಂಗ್ರೆಸ್ ಏನು ಮಾಡಿತು ಅನ್ನೋದು ಎಲ್ಲರಿಗೂ ಗೊತ್ತು. ದೊಡ್ಡ ಸಮುದಾಯದ ಸಿಎಂ ಅನ್ನು ಕಾಂಗ್ರೆಸ್‌ ಮೊದಲಿನಿಂದಲೂ ಟಾರ್ಗೆಟ್‌ ಮಾಡಿದೆ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕೂಡ ದನಿಗೂಡಿಸಿದ್ದಾರೆ.

ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ, ಯಡಿಯೂರಪ್ಪ ಅವರನ್ನು ಕೆಳಗಿಳಿಸಿದಾಗ ಈ ಕನಿಕರ ಎಲ್ಲಿಗೆ ಹೋಗಿತ್ತು. ಬಸವಣ್ಣನ ತತ್ವಗಳನ್ನು ನೀವು ಪಾಲಿಸ್ತಿದ್ದೀರಾ, 11 ತಿಂಗಳಿಗೆ ಸದಾನಂದ ಗೌಡ ಅವರನ್ನು ಅಧಿಕಾರದಿಂದ ಇಳಿಸಿದ್ರು, ಹಾಗಿದ್ದರೆ, ನೀವೆಲ್ಲಾ ಗೌಡರ ವಿರೋಧಿಗಳಾ ಎಂದು ಪ್ರಶ್ನೆ ಮಾಡಿದ್ದಾರೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more