News Hour: ಪೇಸಿಎಂ ಅಸ್ತ್ರಕ್ಕೆ ಬಿಜೆಪಿ ನಾಯಕರ ಜಾತಿ ಪ್ರತ್ಯಸ್ತ್ರ!

News Hour: ಪೇಸಿಎಂ ಅಸ್ತ್ರಕ್ಕೆ ಬಿಜೆಪಿ ನಾಯಕರ ಜಾತಿ ಪ್ರತ್ಯಸ್ತ್ರ!

Published : Sep 26, 2022, 11:46 PM ISTUpdated : Sep 26, 2022, 11:47 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಪೇಸಿಎಂ ಅಸ್ತ್ರಕ್ಕೆ ಬಿಜೆಪಿ, ಟಾರ್ಗೆಟ್‌ ಲಿಂಗಾಯತ ಸಿಎಂ ಪ್ರತ್ಯಸ್ತ್ರ ಹೂಡಿದೆ. ಪೇಸಿಎಂ ಮೂಲಕ ರಾಜ್ಯದಲ್ಲಿ ದೊಡ್ಡ ಸಮುದಾಯದ ನಾಯಕರೊಬ್ಬರನ್ನು ಕಾಂಗ್ರೆಸ್‌ ಪಕ್ಷ ಟಾರ್ಗೆಟ್‌ ಮಾಡುವ ತನ್ನ ಇತಿಹಾಸವನ್ನು ಮುಂದುವರಿಸಿದೆ ಎಂದು ಆರೋಪಿಸಿದೆ.

ಬೆಂಗಳೂರು (ಸೆ. 26): ಕಾಂಗ್ರೆಸ್‌ನ ಪೇಸಿಎಂ ಏಟಿನಿಂದ ಜರ್ಜರಿತವಾಗಿರುವ ರಾಜ್ಯ ಬಿಜೆಪಿ, ಈಗ ಜಾತಿ ಅಸ್ತ್ರವನ್ನು ತಂದು ಎದುರೇಟು ನೀಡಿದೆ. ಲಿಂಗಾಯತ ಸಿಎಂಗಳನ್ನೇ ಕಾಂಗ್ರೆಸ್‌ ಪಕ್ಷ ಈವರೆಗೂ ಟಾರ್ಗೆಟ್‌ ಮಾಡುತ್ತಿತ್ತು. ಈ ಬಾರಿ ಮತ್ತೊಮ್ಮೆ ಅದೇ ಕೆಲಸವನ್ನು ಪುನರಾವರ್ತನೆ ಮಾಡಿದೆ ಎಂಟು ಟೀಕಿಸಿದೆ.

ಈ ಕುರಿತಾಗಿ ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್‌, ನಾನು ತುಂಬಾ ಇತಿಹಾಸಕ್ಕೆ ಹೋಗಲು ಬಯಸೋದಿಲ್ಲ. ವೀರೇಂದ್ರ ಪಾಟೀಲ್‌ ಅವರಿಗೆ, ಎಸ್‌ಎಂ ಕೃಷ್ಣ ಅವರಿಗೆ ಕೊನೆಗೆ ನಮ್ಮ ಯಡಿಯೂರಪ್ಪ ಅವರಿಗೆ ಕಾಂಗ್ರೆಸ್ ಏನು ಮಾಡಿತು ಅನ್ನೋದು ಎಲ್ಲರಿಗೂ ಗೊತ್ತು. ದೊಡ್ಡ ಸಮುದಾಯದ ಸಿಎಂ ಅನ್ನು ಕಾಂಗ್ರೆಸ್‌ ಮೊದಲಿನಿಂದಲೂ ಟಾರ್ಗೆಟ್‌ ಮಾಡಿದೆ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕೂಡ ದನಿಗೂಡಿಸಿದ್ದಾರೆ.

ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ, ಯಡಿಯೂರಪ್ಪ ಅವರನ್ನು ಕೆಳಗಿಳಿಸಿದಾಗ ಈ ಕನಿಕರ ಎಲ್ಲಿಗೆ ಹೋಗಿತ್ತು. ಬಸವಣ್ಣನ ತತ್ವಗಳನ್ನು ನೀವು ಪಾಲಿಸ್ತಿದ್ದೀರಾ, 11 ತಿಂಗಳಿಗೆ ಸದಾನಂದ ಗೌಡ ಅವರನ್ನು ಅಧಿಕಾರದಿಂದ ಇಳಿಸಿದ್ರು, ಹಾಗಿದ್ದರೆ, ನೀವೆಲ್ಲಾ ಗೌಡರ ವಿರೋಧಿಗಳಾ ಎಂದು ಪ್ರಶ್ನೆ ಮಾಡಿದ್ದಾರೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more