Lok Sabha elections 2024: 14 ಲೋಕಸಭಾ ಕ್ಷೇತ್ರದಲ್ಲಿನ ಮತದಾನ ಅಂತ್ಯ, ಮತಯಂತ್ರಗಳಲ್ಲಿ 247 ಅಭ್ಯರ್ಥಿಗಳ ಭವಿಷ್ಯ ಭದ್ರ!

Lok Sabha elections 2024: 14 ಲೋಕಸಭಾ ಕ್ಷೇತ್ರದಲ್ಲಿನ ಮತದಾನ ಅಂತ್ಯ, ಮತಯಂತ್ರಗಳಲ್ಲಿ 247 ಅಭ್ಯರ್ಥಿಗಳ ಭವಿಷ್ಯ ಭದ್ರ!

Published : Apr 27, 2024, 10:59 AM ISTUpdated : Apr 27, 2024, 11:00 AM IST

ಕರ್ನಾಟಕದ 14 ಕ್ಷೇತ್ರಗಳಲ್ಲೂ ಸಹ ಶಾಂತಿಯುತವಾಗಿ ಮತದಾನ ನಡೆದಿದ್ದು, ರಾಜ್ಯದಲ್ಲಿ ಒಟ್ಟು ಶೇಕಡಾ 69 ರಷ್ಟು ಮತದಾನ ನಡೆದಿದೆ. ಈ ನಡುವೆ ಸ್ಟ್ರಾಂಗ್ ರೂಮ್‌ಗಳಲ್ಲಿ ಮತದಾರನ ನಿರ್ಧಾರ ಭದ್ರವಾಗಿದ್ದು, ಮೊದಲ ಹಂತದ ಮತದಾನದ ಬಳಿಕ ಅಭ್ಯರ್ಥಿಗಳು ನಿರಾಳರಾಗಿದ್ದಾರೆ.
 

ಲೋಕಸಭಾ ಚುನಾವಣೆ 2024 (Lok Sabha Elections 2024) ಹಿನ್ನೆಲೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನ(Voting) ಅಂತ್ಯವಾಗಿದ್ದು, 247 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಈ ಮೂಲಕ ಮೊದಲ ಹಂತದ ಕರ್ನಾಟಕ(Karnataka) ಮತಯುದ್ಧಕ್ಕೆ ತೆರೆ ಎಳೆಯಲಾಗಿದೆ. ಗಮನಿಸಬೇಕಾದ ವಿಷಯ ಏನೆಂದರೆ 14 ಕ್ಷೇತ್ರಗಳಲ್ಲೂ ಸಹ ಶಾಂತಿಯುತವಾಗಿ ಮತದಾನ ನಡೆದಿದೆ. ಹಾಗೆಯೇ ರಾಜ್ಯದಲ್ಲಿ ಒಟ್ಟು ಶೇಕಡಾ 69 ರಷ್ಟು ಮತದಾನ ನಡೆದಿದ್ದು, ಸ್ಟ್ರಾಂಗ್ ರೂಮ್‌ಗಳಲ್ಲಿ ಮತದಾರನ ನಿರ್ಧಾರ ಭದ್ರವಾಗಿದೆ. ಮೊದಲ ಹಂತದ ಮತದಾನದ ಬಳಿಕ ಅಭ್ಯರ್ಥಿಗಳು ನಿರಾಳರಾಗಿದ್ದು, ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಅಲ್ಲದೆ ಬೂತ್ ಏಜೆಂಟ್‌ಗಳ ಮೂಲಕ ಮತದಾನದ ಮಾಹಿತಿ ಸಂಗ್ರಹಣೆ ಸಹ ಮಾಡಲಾಗುತ್ತಿದೆ. ಹಾಗೆಯೇ  14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆಯವರೆಗೆ ಶೇಕಡಾ 69ರಷ್ಟು ಮತದಾನ ಆಗಿದ್ದು, 201 9ರಲ್ಲಿ 14 ಲೋಕಸಭಾ ಕ್ಷೇತ್ರದಲ್ಲಿ ಶೇ.70.4ರಷ್ಟು ಮತದಾನ ಆಗಿತ್ತು. ಮೇ7ಕ್ಕೆ 2ನೇ ಹಂತದ ಮತದಾನ ನಡೆಯಲಿದ್ದು, ಜೂನ್ 4 ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ವೀಕ್ಷಿಸಿ:  Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more