ಖರ್ಗೆ, ಸಿದ್ದುಗೆ ಗುದ್ದು ನೀಡಿದ ಪ್ರಧಾನಿ ಮೋದಿ, ದಾವರಣಗೆರೆಯಲ್ಲಿ ಕೇಸರಿ ವಿಜಯೋತ್ಸವ!

Mar 25, 2023, 11:24 PM IST

ದಾವಣಗೆರೆಯ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಮೂಲಕ ಕರ್ನಾಟಕದ ಬಹುತೇಕ ಎಲ್ಲಾ ಭಾಗದಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ಮೋದಿ ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯನವರ ಕಪಾಳ ಮೋಕ್ಷ ಪ್ರಕರಣವನ್ನು ಉಲ್ಲೇಖಿಸಿ, ಇದು ಕಾರ್ಯಕರ್ತರನ್ನು ನಡೆಸಿಕೊಳ್ಳುವ ಕಾಂಗ್ರೆಸ್ ಸಂಸ್ಕೃತಿ ಎಂದಿದ್ದಾರೆ. ಇತ್ತ ಖರ್ಗೆ ಕ್ಷೇತ್ರ ಕಲುಬುರಗಿಯಲ್ಲಿ ಮೇಯರ್ ಹಾಗೂ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿದೆ. ಈ ಮೂಲಕ ಕಾಂಗ್ರೆಸ್ ಕ್ಷೇತ್ರಗಳು ಬಿಜೆಪಿ ಪಾಲಾಗುತ್ತಿದೆ. ಇದರಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದಿದ್ದಾರೆ.