Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

Published : Nov 30, 2023, 08:57 PM IST


ಪಂಚರಾಜ್ಯ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಸೂಚನೆ ಸಿಕ್ಕಿದೆ. ಇದು ಕಾಂಗ್ರೆಸ್‌ನ ಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
 

ಬೆಂಗಳೂರು (ನ.30): ದೇಶದ ಅತ್ಯಂತ ಹೊಸ ರಾಜ್ಯವಾಗಿರುವ ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದು ಎಕ್ಸಿಟ್‌ ಪೋಲ್‌ಗಳು ಭವಿಷ್ಯ ನುಡಿದಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಇದು ಕಾಂಗ್ರೆಸ್‌ ಪಕ್ಷ ಮಾಡಿದ ಪರಿಶ್ರಮಕ್ಕೆ ಸಿಕ್ಕ ಯಶಸ್ಸು ಎನ್ನಲಾಗುತ್ತಿದೆ. ಮೂರು ತಿಂಗಳ ಹಿಂದೆ ತೆಲಂಗಾಣದಲ್ಲಿ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂದು ಕೇಳಿದ್ದರೆ, ಎಲ್ಲರ ಬಾಯಲ್ಲೂ ಬಿಆರ್‌ಎಸ್‌ ಹೊರತಾಗಿ ಬೇರೆ ಯಾವ ಹೆಸರೂ ಬಂದಿರಲಿಲ್ಲ. ಆದರೆ, ಕಳೆದ ಮೂರು ತಿಂಗಳಲ್ಲಿ ತೆಲಂಗಾಣವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಆತ್ಮಸ್ಥೈರ್ಯ ಎಕ್ಸಿಟ್‌ ಪೋಲ್‌ನಿಂದ ಬಂದಿದೆ.

Exit Poll: ತೆಲಂಗಾಣದಲ್ಲಿ ಬಿಆರ್‌ಎಸ್‌ ಫ್ಲಾಪ್‌, ಕಾಂಗ್ರೆಸ್‌ಗೆ ಜಯದ ನಗು?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇವಲ 19 ಸೀಟು ಗೆದ್ದಿದ್ದ ಕಾಂಗ್ರೆಸ್‌ ಪಕ್ಷ ತೀರಾ ಮೂರು ತಿಂಗಳ ಹಿಂದಿನವರೆಗೂ ಪೈಪೋಟಿಯಲ್ಲೇ ಇದ್ದಿರಲಿಲ್ಲ. ಆದರೆ, ಈ ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್‌ ಘೋಷಿಸಿದ ಗ್ಯಾರಂಟಿಗಳು ತೆಲಂಗಾಣ ಫಲಿತಾಂಶದಲ್ಲಿ ವರವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more