Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Published : Jan 21, 2023, 05:44 PM IST

ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ಹಾಸನ (ಜ.21): ಇಂದು ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ವೇದಿಕೆಯಲ್ಲಿ ಪದೇ ಪದೆ ಸಿದ್ದರಾಮಯ್ಯ ಅವರ ಪರವಾಗಿ ಇರುವ ಹಾಡುಗಳನ್ನು ಕಲಾವಿದನು ಹೇಳುತ್ತಿದ್ದನು. ಈ ವೇಳೆ ಪಕ್ಷದ ಕಾರ್ಯಕ್ರಮದಲ್ಲಿ ಒಬ್ಬರ ಕುರಿತಾಗಿ ಹೊಗಳುವ ಹಾಡನ್ನು ಹಾಡಬಾರದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇದಾದ ನಂತರ ಸಿದ್ದು ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನು ತನ್ನ ಹಾಡನ್ನು ನಿಲ್ಲಿಸಿದ್ದಾನೆ. ಆದರೆ, ವೇದಿಕೆಯಲ್ಲಿ ಕುಳಿತಿರುವಾಗಲೇ ಡಿ.ಕೆ. ಸುರೇಶ್‌ ಸಿದ್ದರಾಮಯ್ಯ ಅವರ ಕುರಿತಾದ ಹಾಡನ್ನು ಹೇಳದಂತೆ ತಡೆದಿರುವುದರ ಘಟನೆಯ ಕುರಿತು ರಾಜಕೀಯ ವಲಯದಲ್ಲಿ ಪರ- ವಿರೋಧಗಳು ಚರ್ಚೆ ಆಗುತ್ತಿವೆ. ಇನ್ನು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹೇಳಿಕೊಳ್ಳುತ್ತಿದ್ದು, ಈ ಬಗ್ಗೆ ಇನ್ನೂ ಮುಸುಕಿನ ಗುದ್ದಾಟ ಮುಂದುವರೆದಿದೆ ಎನ್ನುವುದು ಈ ಘಟನೆಯಿಂದ ಬಹಿರಂಗವಾಗಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more