ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

Published : Aug 18, 2022, 10:56 PM IST

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಭಾರಿ ಗಲಭೆ ಸೃಷ್ಟಿಸಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ವಿರುದ್ಧವೇ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿತ್ತು. ಸಾವರ್ಕರ್ ಫೋಟೋ ತೆರವು ಇದರ ಭಾಗವಾಗಿದೆ. ಮುಂದುವರಿದು ಗಣೇಶೋತ್ಸವ ಗಲಾಟೆಯೂ ನಡೆಯಲಿದೆ ಎಂಬ ಮಾಹಿತಿ ನೀಡಿದೆ. ಇದರಂತೆ ಗಲಾಟೆಗಳು ಆರಂಭಗೊಂಡಿದೆ. ಸಿದ್ದು ಮೇಲೆ ಮೊಟ್ಟೆ ಎಸೆತ, ಸಾವರ್ಕರ್ ಫೋಟೋ ಗಲಾಟೆ ಸೇರಿದಂತೆ ಇಂದಿನ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಾವರ್ಕರ್ ಫೋಟೋ ವಿವಾದ ಹೇಳಿಕೆ ಸಿದ್ದರಾಮಯ್ಯನವರಿಗೆ ತೀವ್ರ ಹಿನ್ನಡೆ ತಂದಿದೆ. ಕೊಡಗು ಪ್ರವಾಸದಲ್ಲಿದ್ದ ಸಿದ್ದರಾಮಯ್ಯನವರಿಗೆ ಘೇರಾವ್ ಹಾಕಿದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ನಡೆದಿದೆ. ಟಿಪ್ಪು ಭಕ್ತ ಸಿದ್ದು ಕೊಡಗಿದೆ ಕಾಲಿಡುವುದು ಬೇಡ ಎಂದು ಪ್ರತಿಭಟನೆ ನಡೆದಿದೆ. ಕೊಡಗಿನಲ್ಲಿ ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದ ಘಟನೆಯನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ. ಆದರೆ ಕೊಡಗಿಲ್ಲಿ ಸಿದ್ದು ವಿರುದ್ಧ ಈ ಮಟ್ಟಿಗೆ ಆಕ್ರೋಶ ವ್ಯಕ್ತಪಡಿಸಲು ಕಾರಣವೇನು ಅನ್ನೋದನ್ನು ಪ್ರತಾಪ್ ಸಿಂಹ ಬಿಚ್ಚಿಟ್ಟಿದ್ದಾರೆ.  ಸಿದ್ದರಾಮಯ್ಯನವರ ಮುಸ್ಲಿಮ್ ಜಾಗದಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ಸರಿಯಲ್ಲ ಎಂಬ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಮುಸ್ಲಿಮ್, ಹಿಂದೂ ಜಾಗ ಅಂತಾ ಇಲ್ಲ. ಭಾರತೀಯರ ಜಾಗ ಇದು ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more