ಮೋದಿ ಫೇಕ್ ವಿಡಿಯೋ ಶೇರ್ ಮಾಡಿದ ಪ್ರಿಯಾಂಕ್ ಖರ್ಗೆ: ಕಾಂಗ್ರೆಸ್‌ಗೆ ವೋಟ್ ಹಾಕುವಂತೆ ಹೇಳಿದ್ರಾ ಸೆಲೆಬ್ರಿಟಿಗಳು..?

ಮೋದಿ ಫೇಕ್ ವಿಡಿಯೋ ಶೇರ್ ಮಾಡಿದ ಪ್ರಿಯಾಂಕ್ ಖರ್ಗೆ: ಕಾಂಗ್ರೆಸ್‌ಗೆ ವೋಟ್ ಹಾಕುವಂತೆ ಹೇಳಿದ್ರಾ ಸೆಲೆಬ್ರಿಟಿಗಳು..?

Published : Apr 30, 2024, 10:52 AM ISTUpdated : Apr 30, 2024, 10:53 AM IST

ಸೋಷಿಯಲ್ ಮೀಡಿಯಾಗಳಲ್ಲಿ ತಿರುಚಿದ ವಿಡಿಯೋಗಳ ಅಬ್ಬರ
ಕಾಂಗ್ರೆಸ್ ಪರವಾದ..ಬಿಜೆಪಿ ವಿರುದ್ಧವಾದ ಫೇಕ್ ವಿಡಿಯೋಸ್
ವೈರಲ್ ಆದ ಅಮೀರ್.. ಅಲ್ಲು ಅರ್ಜುನ್ ಫೇಕ್ ವಿಡಿಯೋಸ್
ದೇಶದ ಮೂಡ್ ಚೈಂಜ್ ಮಾಡುವ ಪ್ರಯತ್ನ ಮಾಡ್ತಿರೋದ್ಯಾರು? 

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ(Karnataka) ಜನತೆಯನ್ನು ಪಾಪಿಗಳು ಅಂದರಾ? ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. ಮೋದಿ(Narendra Modi) ಹೀಗೆ ಹೇಳಿದ್ದಾರೆಂದು ವಿಡಿಯೋ ಪೋಸ್ಟ್ ಮಾಡಿದ್ದವರು ಯಾರು ಗೊತ್ತಾ? ಮಲ್ಲಿಕಾರ್ಜುಕ್ ಖರ್ಗೆ ಅವರ ಮಗ ಪ್ರಿಯಾಂಕ ಖರ್ಗೆ? ಇವರೇ ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆಂದ್ರೆ ಇದು ನಿಜಾನಾ? ಇಲ್ಲಿ ನೋಡಿ. ಪ್ರಿಯಾಂಕ್ ಖರ್ಗೆ ತಮ್ಮದೇ ಟ್ವೀಟ್ ಪೇಜ್‌ನಲ್ಲಿ ಮೋದಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಅರೇ! ಇದೇನಿದು? ಕಟ್ಟರ್ ಬಿಜೆಪಿ ವಿರೋಧಿ, ಕಾಂಗ್ರೆಸ್(Congress) ಕಟ್ಟಾಳು ಪ್ರಿಯಾಂಕ್ ಖರ್ಗೆ(Priyank Kharge) ಅವರು ತಮ್ಮ ಪೇಜ್‌ನಲ್ಲಿ ಮೋದಿ ವಿಡಿಯೋ ಶೇರ್ ಮಾಡಿದ್ದಾರಾ? ಎಂದು ಅಚ್ಚರಿಯಾಗಬೇಡಿ. ಮೋದಿ ಇದರಲ್ಲಿ ಹೇಳಿದ್ದೇನೆಂದರೆ, ಕರ್ನಾಟಕದ ಜನ ಈ ಹಿಂದೆ ಪಾಪ ಮಾಡಿದ್ದಾರಲ್ವಾ, ಅವರು ಮಾಡಿದ ಆ ಪಾಪಕ್ಕೆ ಈ ಚುನಾವಣೆಯಲ್ಲಿ ನೀವೆಲ್ಲ ಶಿಕ್ಷೆ ಕೊಡಿ ಎಂದು ಈ ವಿಡಿಯೋದಲ್ಲಿ ಮೋದಿ ಹೇಳಿದ್ದಾರೆ. ಈ ವಿಡಿಯೋ ಪೋಸ್ ಮಾಡಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಏನೆಂದು ಬರೆದುಕೊಂಡಿದ್ದಾರೆ ಗೊತ್ತಾ? ಪ್ರಧಾನಿ ಮೋದಿಯವರೇ ಕನ್ನಡಿಗರನ್ನು(Kannadigas) ಪಾಪಿಗಳು ಎಂದೇಕೆ ಕರೆದಿದ್ದೀರಿ? ಕನ್ನಡಿರ ಮೇಲೆ ನಿಮಗೇಕೆ ಇಷ್ಟೊಂದು ಕೋಪ? ಕನ್ನಡಿಗರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ? ಕನ್ನಡಿಗರು ಯಾವ ಪಾಪ ಮಾಡಿದ್ದಾರೆ? ಭ್ರಷ್ಟ ಬಿಜೆಪಿಯನ್ನು ತಿರಸ್ಕರಿಸಿದ್ದು ಪಾಪವೇ? 40% ಕಮಿಷನ್ ಸರ್ಕಾರವನ್ನು ಒದ್ದೋಡಿಸಿದ್ದು ಪಾಪವೇ? 25 ಬಿಜೆಪಿ ಸಂಸದರು ನಿಷ್ಕ್ರೀಯರಾಗಿದ್ದು ಕನ್ನಡಿಗರ ಯಾವ ಪಾಪಕ್ಕೆ? ಹೀಗೆ ಇನ್ನೂ ಏನೇನೂ ಉದ್ದಕ್ಕೆ ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ. ಇಷ್ಟೆಲ್ಲ ಬರೆದುಕೊಳ್ಳುವ ಮೊದಲು ಈ ವಿಡಿಯೋ ನಿಜವಾದದ್ದಾ ಅಥವಾ ಸುಳ್ಳಾ ಅನ್ನೋ ಯೋಚನೆಯನ್ನೂ ಈ ಮಹಾನ್ ಮೇಧಾವಿ ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ. ಪ್ರಿಯಾಂಕ್ ಖರ್ಗೆ ಮೋದಿ ಮಾತನ್ನು ತಿರುಚಿದ ವಿಡಿಯೋವನ್ನು ಇಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಹಾಗಿದ್ರೆ ನಿಜವಾದ ವಿಡಿಯೋದಲ್ಲಿ ಏನಿದೆ ಅನ್ನೋದನ್ನು ಇಲ್ಲಿ ಕೇಳಿ.

ಇದನ್ನೂ ವೀಕ್ಷಿಸಿ:  Prajwal Revanna : ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನೆಯ ಜ್ವಾಲಾಗ್ನಿ: SIT ಎದುರು ಸಂತ್ರಸ್ತೆಯರು ಹೇಳಿದ್ದೇನು ?

23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more