ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

Published : Jun 05, 2024, 09:51 AM IST

ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ನಮಗೆ ಹಿನ್ನಡೆ ಆಗಿರಬಹುದು ಅಂತ ಮೇಲ್ನೋಟಕ್ಕೆ ಅನ್ನಿಸುತ್ತೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
 

ನಮ್ಮ ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿದ್ದೇವೆ, ಕಲ್ಯಾಣ ಕರ್ನಾಟಕದ (Kalyana Karnataka) ಅಭಿವೃದ್ಧಿ ನೀಲಿನಕ್ಷೆ ರೂಪಿಸಿದ್ದೇವೆ, ನಾವು ಅಭಿವೃದ್ಧಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆ ನೀಡಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ(Kalaburagi Lok sabha) ಕಾಂಗ್ರೆಸ್ ಗೆಲುವಿಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿ, ನಾವು ಜಾತಿ, ದೇವರು, ಧರ್ಮದ ಹೆಸರಿನಲ್ಲಿ ಚುನಾವಣೆ ಮಾಡಿಲ್ಲ. ಅಭಿವೃದ್ಧಿ ಯೋಜನೆಗಳನ್ನು ನೋಡಿ  ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದು ಸ್ಥಾನ ಗೆದ್ದಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇನ್ನಷ್ಟು ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು ಆದರೆ ಆಗಿಲ್ಲ, ಏಕೆಂದು ಸಮಾಲೋಚನೆ ಮಾಡುತ್ತೇವೆ, ಹೋದ ಬಾರಿಯಂತೆ ನಾಲ್ಕು ಲಕ್ಷ, ಮೂರು ಲಕ್ಷ ಅಂತರದಿಂದ ಬಿಜೆಪಿಯವರು(BJP) ಗೆಲ್ಲಲು ಸಾಧ್ಯವಾಗಿಲ್ಲ, ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ನಮಗೆ ಹಿನ್ನಡೆ ಆಗಿರಬಹುದು ಅಂತ ಮೇಲ್ನೋಟಕ್ಕೆ ಅನ್ನಿಸುತ್ತೆ, ಆದರೆ ಜೆಡಿಎಸ್ ನವರು ಒಂದು ಸ್ಥಾನ ಕಳೆದುಕೊಂಡಿದ್ದಾರೆ, ಬಿಜೆಪಿಯವರು ಹಲವಾರು ಸ್ಥಾನ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು. 

ಬೆಂಗಳೂರು ಗ್ರಾಮಾಂತರದಲ್ಲಿ ಡಿ ಕೆ ಸುರೇಶ್ (D K Suresh) ಸೋಲು ಅಘಾತ ತಂದಿದೆ, ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟಾರ್ಗೆಟ್ ಮಾಡಿದಂತೆ ಈ ಬಾರಿ ಬಿಜೆಪಿಯವರು ಡಿ ಕೆ ಸುರೇಶ್  ಅವರನ್ನು ಟಾರ್ಗೆಟ್ ಮಾಡಿದ್ರು, ಖರ್ಗೆ ಅವರನ್ನು ಕಳೆದುಕೊಂಡು ಕಲಬುರಗಿ ಅಭಿವೃದ್ಧಿ ಕಾಣದಂತೆ ಆಯಿತು. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜನರೂ ಅನುಭವಿಸ್ತಾರೆ ಎಂದು ಬೇಸರ ಹೊರಹಾಕಿದರು. 

ದೇಶದಲ್ಲಿ 295 ಸ್ಥಾನ ಗೆಲ್ಲುವ ನಿರೀಕ್ಷೆ ಹುಸಿಯಾಗಿರುವ ಬಗ್ಗೆ ಖರ್ಗೆ ಪ್ರತಿಕ್ರಿಯೆ ನೀಡಿ,ಜನ ನಮ್ಮ ನಿರೀಕ್ಷೆಯಂತೆ ಕೈ ಹಿಡಿಲಿಕ್ಕಿಲ್ಲ. ಆದ್ರೆ, ಬಿಜೆಪಿಯವರಿಗೂ ಜನ ಕೈ ಹಿಡಿದಿಲ್ಲ, ಅವರು ಚಾರಸೋ ಪಾರ್ ಅಂತಿದ್ರು, ಕೇಂದ್ರದಲ್ಲಿ ಅಧಿಕಾರ ಹಿಡಿಯಲು ನಾವು ಖಂಡಿತ ಪ್ರಯತ್ನ ಮಾಡ್ತಿವಿ, ನಾವು ಚುನಾವಣೆ ನಡೆಸುವುದೇ ಅಧಿಕಾರಕ್ಕೆ ಬರುವುದಕ್ಕೋಸ್ಕರ, ಅಧಿಕಾರ ಪಡೆಯುವುದು ಜ‌ನ ಸೇವೆ ಮಾಡಲು ಸಂವಿಧಾನ ಉಳಿಸಲು.ನಮ್ಮ ಹಳೆಯ ಸ್ನೇಹಿತರ ಭೇಟಿ ಮಾಡ್ತಿವಿ, ಅವರೂ ನಮ್ಮ ಜೊತೆ ಬರಬಹುದು ಬಿಜೆಪಿಯವರೂ ನಮ್ಮ ಜೊತೆ ಬರಬಹುದುಕಾದು ನೋಡೋಣ ಏನಾಗುತ್ತದೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!