ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

Published : Jun 05, 2024, 09:51 AM IST

ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ನಮಗೆ ಹಿನ್ನಡೆ ಆಗಿರಬಹುದು ಅಂತ ಮೇಲ್ನೋಟಕ್ಕೆ ಅನ್ನಿಸುತ್ತೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
 

ನಮ್ಮ ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿದ್ದೇವೆ, ಕಲ್ಯಾಣ ಕರ್ನಾಟಕದ (Kalyana Karnataka) ಅಭಿವೃದ್ಧಿ ನೀಲಿನಕ್ಷೆ ರೂಪಿಸಿದ್ದೇವೆ, ನಾವು ಅಭಿವೃದ್ಧಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆ ನೀಡಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ(Kalaburagi Lok sabha) ಕಾಂಗ್ರೆಸ್ ಗೆಲುವಿಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿ, ನಾವು ಜಾತಿ, ದೇವರು, ಧರ್ಮದ ಹೆಸರಿನಲ್ಲಿ ಚುನಾವಣೆ ಮಾಡಿಲ್ಲ. ಅಭಿವೃದ್ಧಿ ಯೋಜನೆಗಳನ್ನು ನೋಡಿ  ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದು ಸ್ಥಾನ ಗೆದ್ದಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇನ್ನಷ್ಟು ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು ಆದರೆ ಆಗಿಲ್ಲ, ಏಕೆಂದು ಸಮಾಲೋಚನೆ ಮಾಡುತ್ತೇವೆ, ಹೋದ ಬಾರಿಯಂತೆ ನಾಲ್ಕು ಲಕ್ಷ, ಮೂರು ಲಕ್ಷ ಅಂತರದಿಂದ ಬಿಜೆಪಿಯವರು(BJP) ಗೆಲ್ಲಲು ಸಾಧ್ಯವಾಗಿಲ್ಲ, ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ನಮಗೆ ಹಿನ್ನಡೆ ಆಗಿರಬಹುದು ಅಂತ ಮೇಲ್ನೋಟಕ್ಕೆ ಅನ್ನಿಸುತ್ತೆ, ಆದರೆ ಜೆಡಿಎಸ್ ನವರು ಒಂದು ಸ್ಥಾನ ಕಳೆದುಕೊಂಡಿದ್ದಾರೆ, ಬಿಜೆಪಿಯವರು ಹಲವಾರು ಸ್ಥಾನ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು. 

ಬೆಂಗಳೂರು ಗ್ರಾಮಾಂತರದಲ್ಲಿ ಡಿ ಕೆ ಸುರೇಶ್ (D K Suresh) ಸೋಲು ಅಘಾತ ತಂದಿದೆ, ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟಾರ್ಗೆಟ್ ಮಾಡಿದಂತೆ ಈ ಬಾರಿ ಬಿಜೆಪಿಯವರು ಡಿ ಕೆ ಸುರೇಶ್  ಅವರನ್ನು ಟಾರ್ಗೆಟ್ ಮಾಡಿದ್ರು, ಖರ್ಗೆ ಅವರನ್ನು ಕಳೆದುಕೊಂಡು ಕಲಬುರಗಿ ಅಭಿವೃದ್ಧಿ ಕಾಣದಂತೆ ಆಯಿತು. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜನರೂ ಅನುಭವಿಸ್ತಾರೆ ಎಂದು ಬೇಸರ ಹೊರಹಾಕಿದರು. 

ದೇಶದಲ್ಲಿ 295 ಸ್ಥಾನ ಗೆಲ್ಲುವ ನಿರೀಕ್ಷೆ ಹುಸಿಯಾಗಿರುವ ಬಗ್ಗೆ ಖರ್ಗೆ ಪ್ರತಿಕ್ರಿಯೆ ನೀಡಿ,ಜನ ನಮ್ಮ ನಿರೀಕ್ಷೆಯಂತೆ ಕೈ ಹಿಡಿಲಿಕ್ಕಿಲ್ಲ. ಆದ್ರೆ, ಬಿಜೆಪಿಯವರಿಗೂ ಜನ ಕೈ ಹಿಡಿದಿಲ್ಲ, ಅವರು ಚಾರಸೋ ಪಾರ್ ಅಂತಿದ್ರು, ಕೇಂದ್ರದಲ್ಲಿ ಅಧಿಕಾರ ಹಿಡಿಯಲು ನಾವು ಖಂಡಿತ ಪ್ರಯತ್ನ ಮಾಡ್ತಿವಿ, ನಾವು ಚುನಾವಣೆ ನಡೆಸುವುದೇ ಅಧಿಕಾರಕ್ಕೆ ಬರುವುದಕ್ಕೋಸ್ಕರ, ಅಧಿಕಾರ ಪಡೆಯುವುದು ಜ‌ನ ಸೇವೆ ಮಾಡಲು ಸಂವಿಧಾನ ಉಳಿಸಲು.ನಮ್ಮ ಹಳೆಯ ಸ್ನೇಹಿತರ ಭೇಟಿ ಮಾಡ್ತಿವಿ, ಅವರೂ ನಮ್ಮ ಜೊತೆ ಬರಬಹುದು ಬಿಜೆಪಿಯವರೂ ನಮ್ಮ ಜೊತೆ ಬರಬಹುದುಕಾದು ನೋಡೋಣ ಏನಾಗುತ್ತದೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?