ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

May 3, 2023, 4:36 PM IST

ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್‌ ವಿರುದ್ಧ ಭಜರಂಗದಳ ಕಾರ್ಯಕರ್ತರು  ಮಂಡ್ಯದ  ಕೆರೆಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌  ಒಂದು ಧರ್ಮದ ಓಲೈಕೆಗೆ ಈ ರೀತಿ ಪ್ರಯತ್ನ ನಡೆಸುತ್ತಿದೆ ಎಂದು ಈ ವೇಳೆ ಆರೋಪ ಮಾಡಿದ್ದಾರೆ. ಪ್ರತಿಭಟನೆಯ ಭಾಗವಾಗಿ ಕಾರ್ಯಕರ್ತರು ಕಾಂಗ್ರಸ್‌ನ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಡಿಕೆಶಿ ಹಾಗೂ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ನಡುವೆ ನಾಳೆ ರಾಜ್ಯದ ಎಲ್ಲಾ ಕಡೆಯಿಂದ ಪ್ರತಿಭಟನೆ ನಡೆಸಲು ಭಜರಂಗದಳ ತೀರ್ಮಾನಿಸಿದೆ. 

ಇದನ್ನೂ ವೀಕ್ಷಿಸಿ: ಪ್ರಣಾಳಿಕೆಯಲ್ಲೂ ಯಟವಟ್ಟು ಮಾಡಿಕೊಳ್ತಾ ಕಾಂಗ್ರೆಸ್‌? : ಸಿಟ್ಟಿಗೆದ್ದಿರುವ ಹಿಂದೂಪರ ಸಂಘಟನೆಗಳು