PSI Scam ಮತ್ತೊಬ್ಬ ಬಿಜೆಪಿ ನಾಯಕನ ಹೆಸರು, ಆಡಿಯೋ ಲೀಕ್‌ನಿಂದ ರಹಸ್ಯ ಬಯಲು!

PSI Scam ಮತ್ತೊಬ್ಬ ಬಿಜೆಪಿ ನಾಯಕನ ಹೆಸರು, ಆಡಿಯೋ ಲೀಕ್‌ನಿಂದ ರಹಸ್ಯ ಬಯಲು!

Published : Sep 06, 2022, 11:41 PM IST

ಪಿಎಸ್ಐ ನೇಮಕಾತಿ ಹಗರಣದ ಮತ್ತೊಂದು ರಹಸ್ಯ ಬಯಲಾಗಿದೆ. ಅಭ್ಯರ್ಥಿ ಕೈಯಿಂದ 15 ಲಕ್ಷ ರೂಪಾಯಿ ಲಂಚ ಪಡೆದಿರುವ ಬಿಜೆಪಿ ಶಾಸಕನ ಆಡಿಯೋ ಲೀಕ್ ಆಗಿದೆ. ನೇಮಕಾತಿ ಹಗರಣ, ಬೆಂಗಳೂರು ಮಳೆ ಅವಾಂತರ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪಿಎಸ್ಐ ಅಕ್ರಮದಲ್ಲಿ ಇದೀಗ ಬಿಜೆಪಿ ಕನಗಿರಿ ಶಾಸಕ ದಡೇಸುಗೂರ್ ಹೆಸರು ಕೇಳಿಬಂದಿದೆ. ಅಭ್ಯರ್ಥಿಯಿಂದ 15 ಲಕ್ಷ ರೂಪಾಯಿ ಲಂಚ ಪಡೆದಿರುವುದಾಗಿ ಆರೋಪ ಕೇಳಿಬಂದಿದೆ. ಇದೀಗ ಅಭ್ಯರ್ಥಿಯ ತಂದೆ ಪರಸಪ್ಪ ಹಾಗೂ ಶಾಸಕ ನಡುವಿನ ಸಂಭಾಷಣೆ ಆಡಿಯೋ ಲೀಕ್ ಆಗಿದೆ. ಈ ಆಡಿಯೋದಲ್ಲಿ ಪೊಲೀಸ್ ನೇಮಕಾತಿಗೆ 15 ಲಕ್ಷ ರೂಪಾಯಿ ನೀಡಿರುವುದನ್ನು ವಾಪಸ್ ನೀಡಲು ಕೇಳಿಕೊಂಡಿದ್ದಾರೆ. ಅತ್ತ ಬಿಜೆಪಿ ಶಾಸಕ ಹಣ ವಾಪಸ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಆಡಿಯೋ ಇದೀಗ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಆದರೆ ಪರಸಪ್ಪನಿಗೆ ಬಿಜೆಪಿ ಶಾಸಕರೇ ಧಮ್ಕಿ ಹಾಕಿ ಬಾಯಿ ಮುಚ್ಚಿಸಿದ್ದಾರೆ ಅನ್ನೋ ಆರೋಪ ಬಲವಾಗುತ್ತಿದೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಮಳೆ ಅವಾಂತರ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more