ಬಿಜೆಪಿಯಲ್ಲಿ ಭುಗಿಲೆದ್ದ ಕಿಚ್ಚು: ಯತ್ನಾಳ್ ಉಚ್ಚಾಟನೆ ಫಿಕ್ಸ್?

ಬಿಜೆಪಿಯಲ್ಲಿ ಭುಗಿಲೆದ್ದ ಕಿಚ್ಚು: ಯತ್ನಾಳ್ ಉಚ್ಚಾಟನೆ ಫಿಕ್ಸ್?

Published : Dec 01, 2024, 03:55 PM IST

ಬಿಜೆಪಿಯಲ್ಲಿ ವಿಜಯೇಂದ್ರ ವಿರುದ್ಧ ಯತ್ನಾಳ್ ಬಣದ ನೇರ ಯುದ್ಧ, ಮಾಜಿ ಶಾಸಕರ ಬೀದಿಗಿಳಿದ ಪ್ರತಿಭಟನೆ, ಯತ್ನಾಳ್ ಉಚ್ಚಾಟನೆ ಸನ್ನಿಹಿತ ಎಂಬ ವದಂತಿಗಳ ನಡುವೆ ಪಕ್ಷದಲ್ಲಿ ಭುಗಿಲೆದ್ದಿರುವ ಭಿನ್ನಮತದ ಬೆಂಕಿ ಕಾಂಗ್ರೆಸ್‌ಗೆ ಬ್ರಹ್ಮಾಸ್ತ್ರವಾಗಿದೆ.

ಅದು ಸಹಸ್ರಾಯುಧ ಘರ್ಷಣೆಗೂ ಒಡೆಯದೇ ನಿಂತಿದ್ದ ಒಗ್ಗಟ್ಟಿನ ಮನೆ. ಆ ಮನೆಯ ಪರಿಸ್ಥಿತಿಯೀಗ ಮನೆಯೊಂದು ಮೂರು ಬಾಗಿಲು.. ಹಾದಿ ಬೀದಿ ಜಗಳ, ಹಾರಾಟ, ಚೀರಾಟ.. ಕಮಲಾಧಿಪತಿ ವಿರುದ್ಧ ರೆಬೆಲ್ ನಾಯಕರ ಕಿಚ್ಚು, ಬಂಡೆದ್ದು ದಂಡು ಕಟ್ಟಿದವರ ವಿರುದ್ಧ ಮಾಜಿ ಶಾಸಕರ ರೊಚ್ಚಿಗೆದ್ದಿದ್ದಾರೆ. ಇನ್ನೊಂದೆಡೆ ಕಮಲ ಕಲಿಗಳು ಶತ್ರುನಾಶ, ದುಷ್ಟ ಸಂಹಾರಕ್ಕೆ ಚಾಮುಂಡಿ ಮೊರೆ ಹೋಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್ ಟೀಮ್ ನೇರ ಯುದ್ಧಕ್ಕೆ ನಿಂತಿದೆ. ರೆಬೆಲ್ ಯತ್ನಾಳ್ ವಿರುದ್ಧ ಬಿಜೆಪಿ ಮಾಜಿ ಶಾಸಕರ ಪಡೆ ಬೀದಿಗಿಳಿದಿದೆ. ಸದ್ಯದಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಫಿಕ್ಸ್ ಅಂತ ರೇಣುಕಾಚಾರ್ಯ ಹೇಳುತ್ತಿದ್ದಾರೆ. ಹಾಗಾದರೆ, ಈ ನಾನಾ ನೀನಾ ಗುದ್ದಾಟದಲ್ಲಿ ಗೆಲ್ಲೋರು ಯಾರೆಂಬುದು ಕುತೂಹಲ ಮೂಡಿಸಿದೆ. ಯತ್ನಾಳ್ ಉಚ್ಚಾಟನೆಯ ದಿನ ಹತ್ತಿರ ಬರ್ತಾ ಇದೆ ಅಂದಿರೋರ ಮಾತು ಅದೆಷ್ಟು ಸತ್ಯ ಕಾದು ನೋಡಬೇಕಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದೆಹಲಿಗೆ ಹೋಗಿದ್ದು ಅದೇ ಕಾರಣಕ್ಕಾ ಎಂಬುದಕ್ಕೆ ಉತ್ತರ ಇಲ್ಲಿದೆ ನೋಡಿ.

ಬೂದಿ ಮುಚ್ಚಿದ ಕೆಂಡದಂತಿದ್ದ ಬೆಂಕಿಯೀಗ ಕೆಂಡದ ಮಳೆಯಾಗಿ ಸುರೀತಾ ಇದೆ. ಬಿಜೆಪಿಯೊಳಗೆ ಸುರಿಯುತ್ತಿರೋ ಕೆಂಡದ ಮಳೆಯೇ ಕಾಂಗ್ರೆಸ್ ಪಾಲಿಗೆ ಬ್ರಹ್ಮಾಸ್ತ್ರ ಆಗಿದೆ. ಇದು ರಾಜ್ಯ ಬಿಜೆಪಿಯನ್ನು ಹೆಜ್ಜೆ ಹೆಜ್ಜೆಗೂ ಸುಡುತ್ತಿದೆ. ಅಷ್ಟಕ್ಕೂ ಕೇಸರಿ ಪಡೆಯ ಈ ಕೆಂಡದ ಮಳೆಯ ಬಗ್ಗೆ ಕೈ ನಾಯಕರು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಲಿಷ್ಠ ಸರ್ಕಾರವನ್ನು ಎದುರಿಸಬೇಕು ಎಂದರೆ ಪ್ರತಿಪಕ್ಷವೂ ಅಷ್ಟೇ ಬಲಿಷ್ಠವಾಗಿರಬೇಕು, ಒಗ್ಗಟ್ಟಾಗಿರಬೇಕು. ಆದರೆ, ಬಿಜೆಪಿಯಲ್ಲಿ ಒಗ್ಗಟ್ಟು ಒಡೆದು ಹೋಗಿದೆ.. ಈ ಒಡೆದಿರೋ ಒಗ್ಗಟ್ಟೇ ಕಾಂಗ್ರೆಸ್ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ ಎಂದು ಹೇಳುತ್ತಿದ್ದಾರೆ. ಜೊತೆಗೆ, ಈ ಬೆಂಕಿಯನ್ನು ಆರಿಸುವ ಸಮಯ ಹತ್ತಿರ ಬಂದಿದೆ, ಕ್ಲೈಮ್ಯಾಕ್ಸ್ ಹತ್ತಿರದಲ್ಲೇ ಇದೆ ಅಂತಿದ್ದಾರೆ ಬಿಜೆಪಿ ನಾಯಕರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?