ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

Published : Apr 16, 2023, 08:07 PM IST

ಬೆಂಗಳೂರಿನ ಜೆಪಿ ನಗರದಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು ನಂದಿನಿ ಬೂತ್‌ನಲ್ಲಿ ಪೇಡಾ ತಿಂದು, ಐಸ್‌ ಕ್ರೀಂ ಸವಿಯುವ ಮೂಲಕ ಕೆಎಂಎಫ್‌ಗೆ ಬೆಂಬಲ ಸೂಚಿಸಿದರು.

ಬೆಂಗಳೂರು (ಏ.16): ರಾಜ್ಯದ ಮಾರುಕಟ್ಟೆಗೆ ಅಮುಲ್‌ ಹಾಲು ತಂದಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಾಥ್‌ ನೀಡುವ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಬೆಂಗಳೂರಿನ ಜೆ.ಪಿ. ನಗರದಲ್ಲಿ ನಂದಿನಿ ಪೇಡೆ ಮತ್ತು ಐಸ್ ಕ್ರೀಂ ಅನ್ನು ಸವಿದರು.

ಜೆಪಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರೆ ರ್ಸಾಜನಿಕರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಸಭೆಯಲ್ಲಿ ಭಾಗಗವಹಿಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಪಕ್ಕದಲ್ಲಿಯೇ ಇದ್ದ ಕೆಎಂಎಫ್ ಬೂತ್‌ಗೆ ತೆರಳಿ ಅಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರಿಶೀಲನೆ ಮಾಡಿದರು. ನಂತರ ನಂದಿನಿ ಪೇಡೆಗಳನ್ನು ತಿಂದು ಬಾಯಿ ಚಪ್ಪರಿಸಿದರು. ನಂತರ, ನಂದಿನಿ ಐಎಸ್‌ಕ್ರೀಂಗಳನ್ನು ತಿಂದು, ಅಲ್ಲಿ ಜೊತೆಗಿದ್ದ ಹಲವರಿಗೆ ನಂದಿನಿ ಐಸ್‌ಕ್ರೀಂಗಳನ್ನು ಕೊಡಿಸಿದರು. 

ಬೂತ್‌ ಮಾಲೀಕನೊಂದಿಗೆ ಮಾತುಕತೆ ನಡೆಸಿದ ರಾಹುಲ್‌ ಗಾಂಧಿ ನಂದಿನಿ ಉತ್ಪನ್ನಗಳು ಎಲ್ಲಿಂದ ಬರುತ್ತವೆ. ಎಷ್ಟು ವರ್ಷದಿಂದ ನೀವು ಈ ಕೆಲಸ ಮಾಡುತ್ತಿದ್ದೀರಿ? ಎಮದು ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ಬಳ್ಳಾರಿಯಿಂದ ನಂದಿನಿ ಉತ್ಪನ್ನಗಳು ಬರುತ್ತವೆ ಎಂದು ಮಾಹಿತಿ ನೀಡಿದರು. ಕೊನೆಗೆ ರಾಹುಲ್‌ ಗಾಂಧಿ ಅವರೊಂದಿಗೆ ಬೂತ್‌ನ ಮಾಲೀಕ ಫೋಟೋ ತೆಗೆಸಿಕೊಂಡು ಸಂತಸಪಟ್ಟರು. ಇನ್ನು ಅಂಗಡಿಯಿಂದ ಹೊರಡುವಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಂದಿನಿ ಅಂಗಡಿ ಮಾಲೀಕನಿಗೆ 1 ಸಾವಿರ ರೂ. ಹಣವನ್ನು ನೀಡಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more