ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

Published : Apr 16, 2023, 08:07 PM IST

ಬೆಂಗಳೂರಿನ ಜೆಪಿ ನಗರದಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು ನಂದಿನಿ ಬೂತ್‌ನಲ್ಲಿ ಪೇಡಾ ತಿಂದು, ಐಸ್‌ ಕ್ರೀಂ ಸವಿಯುವ ಮೂಲಕ ಕೆಎಂಎಫ್‌ಗೆ ಬೆಂಬಲ ಸೂಚಿಸಿದರು.

ಬೆಂಗಳೂರು (ಏ.16): ರಾಜ್ಯದ ಮಾರುಕಟ್ಟೆಗೆ ಅಮುಲ್‌ ಹಾಲು ತಂದಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಾಥ್‌ ನೀಡುವ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಬೆಂಗಳೂರಿನ ಜೆ.ಪಿ. ನಗರದಲ್ಲಿ ನಂದಿನಿ ಪೇಡೆ ಮತ್ತು ಐಸ್ ಕ್ರೀಂ ಅನ್ನು ಸವಿದರು.

ಜೆಪಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರೆ ರ್ಸಾಜನಿಕರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಸಭೆಯಲ್ಲಿ ಭಾಗಗವಹಿಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಪಕ್ಕದಲ್ಲಿಯೇ ಇದ್ದ ಕೆಎಂಎಫ್ ಬೂತ್‌ಗೆ ತೆರಳಿ ಅಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರಿಶೀಲನೆ ಮಾಡಿದರು. ನಂತರ ನಂದಿನಿ ಪೇಡೆಗಳನ್ನು ತಿಂದು ಬಾಯಿ ಚಪ್ಪರಿಸಿದರು. ನಂತರ, ನಂದಿನಿ ಐಎಸ್‌ಕ್ರೀಂಗಳನ್ನು ತಿಂದು, ಅಲ್ಲಿ ಜೊತೆಗಿದ್ದ ಹಲವರಿಗೆ ನಂದಿನಿ ಐಸ್‌ಕ್ರೀಂಗಳನ್ನು ಕೊಡಿಸಿದರು. 

ಬೂತ್‌ ಮಾಲೀಕನೊಂದಿಗೆ ಮಾತುಕತೆ ನಡೆಸಿದ ರಾಹುಲ್‌ ಗಾಂಧಿ ನಂದಿನಿ ಉತ್ಪನ್ನಗಳು ಎಲ್ಲಿಂದ ಬರುತ್ತವೆ. ಎಷ್ಟು ವರ್ಷದಿಂದ ನೀವು ಈ ಕೆಲಸ ಮಾಡುತ್ತಿದ್ದೀರಿ? ಎಮದು ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ಬಳ್ಳಾರಿಯಿಂದ ನಂದಿನಿ ಉತ್ಪನ್ನಗಳು ಬರುತ್ತವೆ ಎಂದು ಮಾಹಿತಿ ನೀಡಿದರು. ಕೊನೆಗೆ ರಾಹುಲ್‌ ಗಾಂಧಿ ಅವರೊಂದಿಗೆ ಬೂತ್‌ನ ಮಾಲೀಕ ಫೋಟೋ ತೆಗೆಸಿಕೊಂಡು ಸಂತಸಪಟ್ಟರು. ಇನ್ನು ಅಂಗಡಿಯಿಂದ ಹೊರಡುವಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಂದಿನಿ ಅಂಗಡಿ ಮಾಲೀಕನಿಗೆ 1 ಸಾವಿರ ರೂ. ಹಣವನ್ನು ನೀಡಿದರು.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more