ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

Published : Apr 16, 2023, 08:07 PM IST

ಬೆಂಗಳೂರಿನ ಜೆಪಿ ನಗರದಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು ನಂದಿನಿ ಬೂತ್‌ನಲ್ಲಿ ಪೇಡಾ ತಿಂದು, ಐಸ್‌ ಕ್ರೀಂ ಸವಿಯುವ ಮೂಲಕ ಕೆಎಂಎಫ್‌ಗೆ ಬೆಂಬಲ ಸೂಚಿಸಿದರು.

ಬೆಂಗಳೂರು (ಏ.16): ರಾಜ್ಯದ ಮಾರುಕಟ್ಟೆಗೆ ಅಮುಲ್‌ ಹಾಲು ತಂದಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಾಥ್‌ ನೀಡುವ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಬೆಂಗಳೂರಿನ ಜೆ.ಪಿ. ನಗರದಲ್ಲಿ ನಂದಿನಿ ಪೇಡೆ ಮತ್ತು ಐಸ್ ಕ್ರೀಂ ಅನ್ನು ಸವಿದರು.

ಜೆಪಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರೆ ರ್ಸಾಜನಿಕರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಸಭೆಯಲ್ಲಿ ಭಾಗಗವಹಿಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಪಕ್ಕದಲ್ಲಿಯೇ ಇದ್ದ ಕೆಎಂಎಫ್ ಬೂತ್‌ಗೆ ತೆರಳಿ ಅಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರಿಶೀಲನೆ ಮಾಡಿದರು. ನಂತರ ನಂದಿನಿ ಪೇಡೆಗಳನ್ನು ತಿಂದು ಬಾಯಿ ಚಪ್ಪರಿಸಿದರು. ನಂತರ, ನಂದಿನಿ ಐಎಸ್‌ಕ್ರೀಂಗಳನ್ನು ತಿಂದು, ಅಲ್ಲಿ ಜೊತೆಗಿದ್ದ ಹಲವರಿಗೆ ನಂದಿನಿ ಐಸ್‌ಕ್ರೀಂಗಳನ್ನು ಕೊಡಿಸಿದರು. 

ಬೂತ್‌ ಮಾಲೀಕನೊಂದಿಗೆ ಮಾತುಕತೆ ನಡೆಸಿದ ರಾಹುಲ್‌ ಗಾಂಧಿ ನಂದಿನಿ ಉತ್ಪನ್ನಗಳು ಎಲ್ಲಿಂದ ಬರುತ್ತವೆ. ಎಷ್ಟು ವರ್ಷದಿಂದ ನೀವು ಈ ಕೆಲಸ ಮಾಡುತ್ತಿದ್ದೀರಿ? ಎಮದು ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ಬಳ್ಳಾರಿಯಿಂದ ನಂದಿನಿ ಉತ್ಪನ್ನಗಳು ಬರುತ್ತವೆ ಎಂದು ಮಾಹಿತಿ ನೀಡಿದರು. ಕೊನೆಗೆ ರಾಹುಲ್‌ ಗಾಂಧಿ ಅವರೊಂದಿಗೆ ಬೂತ್‌ನ ಮಾಲೀಕ ಫೋಟೋ ತೆಗೆಸಿಕೊಂಡು ಸಂತಸಪಟ್ಟರು. ಇನ್ನು ಅಂಗಡಿಯಿಂದ ಹೊರಡುವಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಂದಿನಿ ಅಂಗಡಿ ಮಾಲೀಕನಿಗೆ 1 ಸಾವಿರ ರೂ. ಹಣವನ್ನು ನೀಡಿದರು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more