ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

ನಂದಿನಿ ಬೂತ್‌ನಲ್ಲಿ ಪೇಡಾ ತಿಂದು ಐಸ್‌ಕ್ರೀಂ ಸವಿದ ರಾಹುಲ್‌ ಗಾಂಧಿ

Published : Apr 16, 2023, 08:07 PM IST

ಬೆಂಗಳೂರಿನ ಜೆಪಿ ನಗರದಲ್ಲಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು ನಂದಿನಿ ಬೂತ್‌ನಲ್ಲಿ ಪೇಡಾ ತಿಂದು, ಐಸ್‌ ಕ್ರೀಂ ಸವಿಯುವ ಮೂಲಕ ಕೆಎಂಎಫ್‌ಗೆ ಬೆಂಬಲ ಸೂಚಿಸಿದರು.

ಬೆಂಗಳೂರು (ಏ.16): ರಾಜ್ಯದ ಮಾರುಕಟ್ಟೆಗೆ ಅಮುಲ್‌ ಹಾಲು ತಂದಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಾಥ್‌ ನೀಡುವ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಬೆಂಗಳೂರಿನ ಜೆ.ಪಿ. ನಗರದಲ್ಲಿ ನಂದಿನಿ ಪೇಡೆ ಮತ್ತು ಐಸ್ ಕ್ರೀಂ ಅನ್ನು ಸವಿದರು.

ಜೆಪಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರೆ ರ್ಸಾಜನಿಕರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಸಭೆಯಲ್ಲಿ ಭಾಗಗವಹಿಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಪಕ್ಕದಲ್ಲಿಯೇ ಇದ್ದ ಕೆಎಂಎಫ್ ಬೂತ್‌ಗೆ ತೆರಳಿ ಅಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರಿಶೀಲನೆ ಮಾಡಿದರು. ನಂತರ ನಂದಿನಿ ಪೇಡೆಗಳನ್ನು ತಿಂದು ಬಾಯಿ ಚಪ್ಪರಿಸಿದರು. ನಂತರ, ನಂದಿನಿ ಐಎಸ್‌ಕ್ರೀಂಗಳನ್ನು ತಿಂದು, ಅಲ್ಲಿ ಜೊತೆಗಿದ್ದ ಹಲವರಿಗೆ ನಂದಿನಿ ಐಸ್‌ಕ್ರೀಂಗಳನ್ನು ಕೊಡಿಸಿದರು. 

ಬೂತ್‌ ಮಾಲೀಕನೊಂದಿಗೆ ಮಾತುಕತೆ ನಡೆಸಿದ ರಾಹುಲ್‌ ಗಾಂಧಿ ನಂದಿನಿ ಉತ್ಪನ್ನಗಳು ಎಲ್ಲಿಂದ ಬರುತ್ತವೆ. ಎಷ್ಟು ವರ್ಷದಿಂದ ನೀವು ಈ ಕೆಲಸ ಮಾಡುತ್ತಿದ್ದೀರಿ? ಎಮದು ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ಬಳ್ಳಾರಿಯಿಂದ ನಂದಿನಿ ಉತ್ಪನ್ನಗಳು ಬರುತ್ತವೆ ಎಂದು ಮಾಹಿತಿ ನೀಡಿದರು. ಕೊನೆಗೆ ರಾಹುಲ್‌ ಗಾಂಧಿ ಅವರೊಂದಿಗೆ ಬೂತ್‌ನ ಮಾಲೀಕ ಫೋಟೋ ತೆಗೆಸಿಕೊಂಡು ಸಂತಸಪಟ್ಟರು. ಇನ್ನು ಅಂಗಡಿಯಿಂದ ಹೊರಡುವಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಂದಿನಿ ಅಂಗಡಿ ಮಾಲೀಕನಿಗೆ 1 ಸಾವಿರ ರೂ. ಹಣವನ್ನು ನೀಡಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more