ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

Published : May 04, 2024, 10:00 AM IST

ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ..? 
ಅಮೇಥಿಯಿಂದ ದೂರ ಸರಿದಿದ್ದು ಯಾಕೆ ರಾಹುಲ್ ಗಾಂಧಿ..?
ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಕಸರತ್ತು..!

ಲೋಕಸಭೆ ಚುನಾವಣೆ ಕಾವು ರಂಗೇರಿದೆ. ಅದ್ರಲ್ಲೂ ಇಷ್ಟುದಿನ ಅಮೇಥಿ-ರಾಯ್‌ಬರೇಲಿಯಿಂದ(Raebareli) ಕಾಂಗ್ರೆಸ್‌ನ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿತ್ತು. ಆದ್ರೆ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್‌ಬರೇಲಿಯಿಂದ ರಾಹುಲ್ ಗಾಂಧಿಯೇ (Rahul Gandhi) ಕಣಕ್ಕಿಳಿದಿದ್ದಾರೆ. ಇಷ್ಟು ದಿನ ಅಮೇಥಿಯಿಂದ(Amethi) ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿ ಬರ್ತಿತ್ತು. ಈ ಬೆನ್ನಲ್ಲೆ ರಾಹುಲ್ ರಾಯ್‌ಬರೇಲಿಯಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ದೇಶದಲ್ಲಿ ಲೋಕಸಭೆ ಚುನಾವಣೆಯ(Lok Sabha elections 2024) ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರದ ಜೊತೆಗೆ ಹೈವೋಲ್ಟೇಜ್ ಕ್ಷೇತ್ರಗಳ ಕುರಿತ ಚರ್ಚೆ ಜೋರಾಗಿದೆ. ಅಮೇಥಿ-ರಾಯ್‌ಬರೇಲಿ ಈ ಎರಡೂ ಕ್ಷೇತ್ರಗಳು ಈ ಬಾರಿ ಅತಿ ಹೆಚ್ಚು ಸದ್ದು ಮಾಡ್ತಿದೆ. ಇವು ಕಾಂಗ್ರೆಸ್‌ನ(Congress) ಭದ್ರಕೋಟೆ ಎಂದೇ ಜನಪ್ರಿಯತೆಯನ್ನ ಪಡೆದುಕೊಂಡ ಕ್ಷೇತ್ರಗಳು. ಇಷ್ಟು ದಿನ ಅಮೇಥಿ, ರಾಯ್‌ಬರೇಲಿಯಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲವಿತ್ತು. ಅದ್ರಲ್ಲೂ ಕಾಂಗ್ರೆಸ್ ಹೈಕಮಾಂಡ್ ತುಂಬಾ ತಲೆ ಕೆಡಿಸಿಕೊಂಡಿದ್ದ ಕ್ಷೇತ್ರಗಳಿವು. ಮೊದಲೇ ಹೇಳಿದಂತೆ ಇವೆರಡು ಕಾಂಗ್ರೆಸ್‌ನ ಭದ್ರಕೋಟೆ. ಆದ್ರೆ ಕಳೆದ ಬಾರಿಯ ಚುನಾವಣೆಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್‌ ಗಾಂಧಿ ಅಮೇಥಿಯಲ್ಲಿ ಸೋಲಬೇಕಾಯ್ತು. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆಯಲ್ಲಿ ಕಳೆದುಕೊಂಡ ಭದ್ರಕೋಟೆಯನ್ನು ಮತ್ತೆ ವಶಪಡೆಸಿಕೊಳ್ಳಲು ಅಮೇಥಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ ಮಾಡ್ತಾರೆ ಅನ್ನೋ ಸುದ್ದಿ ಕೂಡ ಇತ್ತು. ಆದ್ರೆ ಕೊನೇ ಕ್ಷಣದಲ್ಲಿ ಕಾಂಗ್ರೆಸ್ ದೊಡ್ಡ ಟ್ವಿಸ್ಟ್ ಕೊಟ್ಟಿದೆ. ಈ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಒತ್ತಡವಿದ್ದು, ಅತಿಯಾದ ವ್ಯಯ ಇರಲಿದೆ..

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more