ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

Published : May 04, 2024, 10:00 AM IST

ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ..? 
ಅಮೇಥಿಯಿಂದ ದೂರ ಸರಿದಿದ್ದು ಯಾಕೆ ರಾಹುಲ್ ಗಾಂಧಿ..?
ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಕಸರತ್ತು..!

ಲೋಕಸಭೆ ಚುನಾವಣೆ ಕಾವು ರಂಗೇರಿದೆ. ಅದ್ರಲ್ಲೂ ಇಷ್ಟುದಿನ ಅಮೇಥಿ-ರಾಯ್‌ಬರೇಲಿಯಿಂದ(Raebareli) ಕಾಂಗ್ರೆಸ್‌ನ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿತ್ತು. ಆದ್ರೆ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್‌ಬರೇಲಿಯಿಂದ ರಾಹುಲ್ ಗಾಂಧಿಯೇ (Rahul Gandhi) ಕಣಕ್ಕಿಳಿದಿದ್ದಾರೆ. ಇಷ್ಟು ದಿನ ಅಮೇಥಿಯಿಂದ(Amethi) ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿ ಬರ್ತಿತ್ತು. ಈ ಬೆನ್ನಲ್ಲೆ ರಾಹುಲ್ ರಾಯ್‌ಬರೇಲಿಯಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ದೇಶದಲ್ಲಿ ಲೋಕಸಭೆ ಚುನಾವಣೆಯ(Lok Sabha elections 2024) ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರದ ಜೊತೆಗೆ ಹೈವೋಲ್ಟೇಜ್ ಕ್ಷೇತ್ರಗಳ ಕುರಿತ ಚರ್ಚೆ ಜೋರಾಗಿದೆ. ಅಮೇಥಿ-ರಾಯ್‌ಬರೇಲಿ ಈ ಎರಡೂ ಕ್ಷೇತ್ರಗಳು ಈ ಬಾರಿ ಅತಿ ಹೆಚ್ಚು ಸದ್ದು ಮಾಡ್ತಿದೆ. ಇವು ಕಾಂಗ್ರೆಸ್‌ನ(Congress) ಭದ್ರಕೋಟೆ ಎಂದೇ ಜನಪ್ರಿಯತೆಯನ್ನ ಪಡೆದುಕೊಂಡ ಕ್ಷೇತ್ರಗಳು. ಇಷ್ಟು ದಿನ ಅಮೇಥಿ, ರಾಯ್‌ಬರೇಲಿಯಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲವಿತ್ತು. ಅದ್ರಲ್ಲೂ ಕಾಂಗ್ರೆಸ್ ಹೈಕಮಾಂಡ್ ತುಂಬಾ ತಲೆ ಕೆಡಿಸಿಕೊಂಡಿದ್ದ ಕ್ಷೇತ್ರಗಳಿವು. ಮೊದಲೇ ಹೇಳಿದಂತೆ ಇವೆರಡು ಕಾಂಗ್ರೆಸ್‌ನ ಭದ್ರಕೋಟೆ. ಆದ್ರೆ ಕಳೆದ ಬಾರಿಯ ಚುನಾವಣೆಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್‌ ಗಾಂಧಿ ಅಮೇಥಿಯಲ್ಲಿ ಸೋಲಬೇಕಾಯ್ತು. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆಯಲ್ಲಿ ಕಳೆದುಕೊಂಡ ಭದ್ರಕೋಟೆಯನ್ನು ಮತ್ತೆ ವಶಪಡೆಸಿಕೊಳ್ಳಲು ಅಮೇಥಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ ಮಾಡ್ತಾರೆ ಅನ್ನೋ ಸುದ್ದಿ ಕೂಡ ಇತ್ತು. ಆದ್ರೆ ಕೊನೇ ಕ್ಷಣದಲ್ಲಿ ಕಾಂಗ್ರೆಸ್ ದೊಡ್ಡ ಟ್ವಿಸ್ಟ್ ಕೊಟ್ಟಿದೆ. ಈ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಒತ್ತಡವಿದ್ದು, ಅತಿಯಾದ ವ್ಯಯ ಇರಲಿದೆ..

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more