ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more