ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more