ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more