ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ: ರಾಜೂಗೌಡ

Published : Sep 03, 2023, 01:54 PM IST

ಬಿಜೆಪಿಯಲ್ಲಿ ಅಸಮಾಧಾನ ಇರೋದು ಸತ್ಯ. ವಿಪಕ್ಷ ನಾಯಕನ ಸ್ಥಾನ ಆಯ್ಕೆ ಆಗಬೇಕು ಎಂದು ಕೇಳಿದ್ದೇವೆ. ಬೇಗ ವಿಪಕ್ಷನಾಯಕನ ಆಯ್ಕೆಯಾದ್ರೆ ನಮಗೂ ಅನುಕೂಲ ಎಂದು ಮಾಜಿ ಶಾಸಕ ರಾಜೂಗೌಡ ಹೇಳಿಕೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌(DK shivakumar) ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಜೂಗೌಡ(Former MLA Raju Gowda) ಮಾತನಾಡಿ, ಆಪರೇಷನ್ ಆಗಲು ನನಗೆ ಕ್ಯಾನ್ಸರ್ ಆಗಿಲ್ಲ. ನನಗೆ ಕ್ಯಾನ್ಸರ್ (Cancer) ಆಗಿಲ್ಲ ಗಡ್ಡೆನೂ ಆಗಿಲ್ಲ. ಸಮಸ್ಯೆಯೂ ಆಗಿಲ್ಲ, ಡಾಕ್ಟರ್ ಅವಶ್ಯಕತೆ ಕೂಡ ಇಲ್ಲ ಎಂದು ಹೇಳಿದ್ದಾರೆ. ನಿನ್ನೆ ಸುದೀಪ್(Sudeep) ಅಣ್ಣ ಹುಟ್ಟು ಹಬ್ಬ ಇತ್ತು. ಜೆ.ಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್‌ನಲ್ಲಿ ಪಾರ್ಟಿ ಇತ್ತು. ಬಿ.ಸಿ ಪಾಟೀಲ್ ಕೂಡ ಸಿಕ್ಕಿದ್ರು. ಡಿಕೆಶಿ ಅಣ್ಣಾ ಅವರೂ ಬಂದಿದ್ರು. ಅಲ್ಲಿ ಫಿಲ್ಮ್ ಪ್ರೊಡ್ಯೂಸರ್, ನಟರು ಎಲ್ಲರೂ ಇದ್ರು. ಡಿಕೆಶಿ ಅವರು ರಿಸಲ್ಟ್ ಬಗ್ಗೆ ಕೇಳಿದ್ರು.ನಾವು ಮೊದಲಿಂದಲೂ ಆತ್ಮೀಯರು. ನಾವೇ ಅವರ ಜೊತೆ ಪಾರ್ಟಿಯಲ್ಲಿ ಇದ್ದೆವು ಎಂದು ಹೇಳಿದರು.

ಪಾರ್ಟಿಯಿಂದ ಅವರು ಬೇಗನೆ ಹೊರಟ್ರು. ಸುದೀಪ್ ಅವರ ಹುಟ್ಟು ಹಬ್ಬಕ್ಕಿಂತ ಬೆಳಗ್ಗೆ ಎದ್ದ ಮೇಲೆ ನಮ್ಮದೇ ಹೆಚ್ಚು ಸುದ್ದಿಯಾಗಿದೆ. ತಮ್ಮದು ತಪ್ಪಲ್ಲ, ಆಪರೇಷನ್ ಹಸ್ತ ಅನ್ನೋ ವಿಚಾರವೇ ಹೆಚ್ಚಿದೆ. ನಾನು ಪಕ್ಷ ಬಿಡುವ ಪ್ರಶ್ನೆ ಇಲ್ಲ. ಪಕ್ಷದಲ್ಲಿ ಉತ್ತಮ ಸ್ಥಾನಮಾ‌ನ ನೀಡಿದ್ದಾರೆ. ಚುನಾವಣೆ ಅಂದ ಮೇಲೆ ಸೋಲು, ಗೆಲುವು ಇದ್ದಿದ್ದೆ. ಕಾಂಗ್ರೆಸ್‌ನಿಂದ(Congress) ಹಲವರಿಗೆ ಆಹ್ವಾನ ವಿಚಾರ, ನನಗೆ ಆಹ್ವಾನ ಬಂದಿಲ್ಲ. ರಾಜು ಚೆನ್ನಾಗಿ ಕೆಲಸ ಮಾಡಿದ್ದೆ ಹೇಗೆ ಸೋತೆ ಅಂದ್ರು. ನಿಮ್ಮ ಪ್ರಭಾವ, ಸಿದ್ದರಾಮಯ್ಯ ಅವರ ಪ್ರಭಾವ ಅಂತ ಹೇಳಿದೆ. ಈಗ ಬರುವ ಪ್ರಶ್ನೆ ಇಲ್ಲ. ಗೆದ್ದವರು ಗೆಲುವಿನ ಮಜಾ ಪಡೀತಿದ್ದಾರೆ. ನಾವು ಸೋತ ಮಜಾ ಪಡೀತಿದ್ದೇವೆ. ಗೆಲುವಿನ ಮಜವೇ ಯಾವಾಗಲೂ ಇರಬಾರದು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ನಾನು ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ, ನಮ್ಮ ಪಕ್ಷವೇ ಬೇರೆ ಅವರ ಪಕ್ಷವೇ ಬೇರೆ: ಬಿ.ಸಿ.ಪಾಟೀಲ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more