Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Published : Feb 26, 2024, 05:53 PM IST

ಅಡ್ಡ ಮತದಾನದ ಸುಳಿವು ಕೊಟ್ಟ ಜೆಡಿಎಸ್ ಶಾಸಕ..ಯಾರಿಗೆ ಒಳೇಟು..? 
ಕಾಂಗ್ರೆಸ್ ಪರ ಕ್ರಾಸ್ ವೋಟ್ ಮಾಡ್ತಾರಾ ಜೆಡಿಎಸ್ ಶಾಸಕ ಕಂದಕೂರ್..?    
ಕಾಂಗ್ರೆಸ್ ಶಾಸಕನ ಅಕಾಲಿಕ ಮರಣ.. ಬದಲಾಯ್ತಾ ಮತ ಲೆಕ್ಕಾಚಾರ..?    

ರಾಜ್ಯಸಭಾ ರಹಸ್ಯ. ರಾಜ್ಯ ರಾಜಕಾರಣದಲ್ಲಿ ರೋಚಕ ಅಧ್ಯಾಯವೊಂದಕ್ಕೆ ಮುನ್ನು ಬರೆದಿರೋ ರಾಜ್ಯಸಭಾ ರಣರಂಗ. ಆ ರಣರಂಗಕ್ಕೆ ಮಂಗಳವಾರದ ಮುಹೂರ್ತ. ರಾಜ್ಯಸಭೆಗೆ(Rajyasabha) ಆಯ್ಕೆಯಾಗಲಿರೋದು ನಾಲ್ಕು ಮಂದಿ. ಅಖಾಡದಲ್ಲಿರೋದು ಐದು ಮಂದಿ. ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ(BJP) ಒಂದು ಸ್ಥಾನ. ಇದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಆದ್ರೆ ಒಳಗಿನ ಲೆಕ್ಕಾಚಾರವೇ ಬೇರೆ. ಕಾಂಗ್ರೆಸ್‌ನಿಂದ(Congress) ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ಅಖಾಡದಲ್ಲಿದ್ರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ಸ್ಪರ್ಧೆಯಲ್ಲಿದ್ದಾರೆ. ಆದ್ರೆ ಇಡೀ ಅಖಾಡವನ್ನೇ ರಣರಂಗವಾಗಿಸಿರೋದು ಬಿಜೆಪಿ-ಜೆಡಿಎಸ್ ದೋಸ್ತಿ ಪಾಳೆಯದಿಂದ ಸಿಡಿದಿರೋ ಐದನೇ ಅಸ್ತ್ರ. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಕಮಲದಳ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ಇಡೀ ಚುನಾವಣೆಯ ದಿಕ್ಕನ್ನೇ ಬದಲಿಸಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more