Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Rajyasabha Election: ದೋಸ್ತಿಗೆ ತಿರುಮಂತ್ರ ಹಾಕಲು ಕೈ ಪ್ಲ್ಯಾನ್.. ನಡೆಯುತ್ತಾ ಅಡ್ಡ ಮತದಾನ..?

Published : Feb 26, 2024, 05:53 PM IST

ಅಡ್ಡ ಮತದಾನದ ಸುಳಿವು ಕೊಟ್ಟ ಜೆಡಿಎಸ್ ಶಾಸಕ..ಯಾರಿಗೆ ಒಳೇಟು..? 
ಕಾಂಗ್ರೆಸ್ ಪರ ಕ್ರಾಸ್ ವೋಟ್ ಮಾಡ್ತಾರಾ ಜೆಡಿಎಸ್ ಶಾಸಕ ಕಂದಕೂರ್..?    
ಕಾಂಗ್ರೆಸ್ ಶಾಸಕನ ಅಕಾಲಿಕ ಮರಣ.. ಬದಲಾಯ್ತಾ ಮತ ಲೆಕ್ಕಾಚಾರ..?    

ರಾಜ್ಯಸಭಾ ರಹಸ್ಯ. ರಾಜ್ಯ ರಾಜಕಾರಣದಲ್ಲಿ ರೋಚಕ ಅಧ್ಯಾಯವೊಂದಕ್ಕೆ ಮುನ್ನು ಬರೆದಿರೋ ರಾಜ್ಯಸಭಾ ರಣರಂಗ. ಆ ರಣರಂಗಕ್ಕೆ ಮಂಗಳವಾರದ ಮುಹೂರ್ತ. ರಾಜ್ಯಸಭೆಗೆ(Rajyasabha) ಆಯ್ಕೆಯಾಗಲಿರೋದು ನಾಲ್ಕು ಮಂದಿ. ಅಖಾಡದಲ್ಲಿರೋದು ಐದು ಮಂದಿ. ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಸಂಖ್ಯಾಬಲದ ಪ್ರಕಾರ ಕರ್ನಾಟಕದಿಂದ(Karnataka) ರಾಜ್ಯಸಭೆಗೆ ಆಯ್ಕೆಯಾಗಿ ಹೋಗಲಿರುವ ಸದಸ್ಯ ಸಂಖ್ಯೆ ನಾಲ್ಕು. ಇದ್ರಲ್ಲಿ ಕಾಂಗ್ರೆಸ್"ಗೆ 3, ಬಿಜೆಪಿಗೆ(BJP) ಒಂದು ಸ್ಥಾನ. ಇದು ಮೇಲ್ನೋಟಕ್ಕೆ ಕಾಣ್ತಿರೋ ಲೆಕ್ಕಾಚಾರ. ಆದ್ರೆ ಒಳಗಿನ ಲೆಕ್ಕಾಚಾರವೇ ಬೇರೆ. ಕಾಂಗ್ರೆಸ್‌ನಿಂದ(Congress) ನಾಸಿರ್ ಹುಸೇನ್, ಜಿ.ಸಿ ಚಂದ್ರಶೇಖರ್ ಮತ್ತು ಹೈಕಮಾಂಡ್ ಅಭ್ಯರ್ಥಿ ಅಜಯ್ ಮಾಕೆನ್ ಅಖಾಡದಲ್ಲಿದ್ರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ ಸ್ಪರ್ಧೆಯಲ್ಲಿದ್ದಾರೆ. ಆದ್ರೆ ಇಡೀ ಅಖಾಡವನ್ನೇ ರಣರಂಗವಾಗಿಸಿರೋದು ಬಿಜೆಪಿ-ಜೆಡಿಎಸ್ ದೋಸ್ತಿ ಪಾಳೆಯದಿಂದ ಸಿಡಿದಿರೋ ಐದನೇ ಅಸ್ತ್ರ. ಗೆಲ್ಲುವ ನಂಬರ್ ಇಲ್ಲದೇ ಇದ್ದರೂ, ಕಮಲದಳ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿರೋದು ಇಡೀ ಚುನಾವಣೆಯ ದಿಕ್ಕನ್ನೇ ಬದಲಿಸಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more