ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ ನಂಗನಾಚ್

Published : Nov 26, 2022, 02:36 PM IST

ರಾಮನಗರ ಕಾಂಗ್ರೆಸ್ ನಗರಸಭೆ ಸದಸ್ಯನ ಹುಟ್ಟು ಹಬ್ಬದ ಪಾರ್ಟಿಯಲ್ಲಿ, ಮೋಜು ಮಸ್ತಿ ನಡೆದ ವಿಡಿಯೋ ವೈರಲ್ ಆಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ನಂಗನಾಚ್ ನಡೆದಿದ್ದು, ರಾಮನಗರ ‌ನಗರಸಭೆ 19ನೇ ವಾರ್ಡ್ ಸದಸ್ಯ ದೌಲತ್ ಶರೀಷ್ ಹುಟ್ಟಹಬ್ಬದಲ್ಲಿ ಮೋಜು ಮಸ್ತಿ ಮಾಡಲಾಗಿದೆ. ರಾಮನಗರದ ಯಾರಬ್ ನಗರದಲ್ಲಿರೋ ಖಾಸಗಿ ಕಲ್ಯಾಣ ಮಂಟಪದಲ್ಲಿ ಬರ್ತಡೇ ಪಾರ್ಟಿ ಮಾಡಲಾಗಿದ್ದು, ಬೆಂಗಳೂರಿನಿಂದ ಡ್ಯಾನ್ಸರ್'ಗಳನ್ನು ಕರೆಸಲಾಗಿದೆ. ಅರೆಬರೆ ಬಟ್ಟೆಯುಟ್ಟು ಡ್ಯಾನ್ಸ್ ಮಾಡಿದ್ದು, ಅವರ ಮೇಲೆ ಹಣ ಎಸೆದು ಮೋಜು ಮಸ್ತಿ ಮಾಡಲಾಗಿದೆ. ಕಾಂಗ್ರೆಸ್ ನಗರಸಭಾ ಸದಸ್ಯನಿಂದಲೇ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸಿದ್ದಾರೆ ಕೈ ಸದಸ್ಯರು. ಪಾರ್ಟಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಕೆ. ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಮುತ್ತುರಾಜ್, ದೌಲತ್ ಷರೀಫ್, ಆಜ್ಮತ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ನವೆಂಬರ್ 24 ರ ರಾತ್ರಿ ಪಾರ್ಟಿ ನಡೆದಿದ್ದು, ನಗರಸಭಾ ಸದಸ್ಯರ ವರ್ತನೆಗೆ ಸಾರ್ವಜನಿಕರ ಖಂಡನೆ ವ್ಯಕ್ತವಾಗಿದೆ.

ಕೊಪ್ಪಳದ ಸಚಿವರ ಹುಟ್ಟುಹಬ್ಬದ ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಕರ ನಿಯೋಜನೆ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more