ಯಡಿಯೂರಪ್ಪ ಸರ್ಕಾರ ಸೇಫ್: ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದ ಅನರ್ಹ ಶಾಸಕ

Nov 13, 2019, 2:32 PM IST

ಬೆಂಗಳೂರು[ನ.13]: ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಎಲ್ಲ ಅನರ್ಹ ಶಾಸಕರ ಕ್ಷೇತಗಳಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗೋದು ಪಕ್ಕಾ ಎಂದು ಹೇಳಲಾಗುತ್ತಿದೆ.  ಇನ್ನು ಅನರ್ಹ ಶಾಸಕರ ನಾಯಕ ಎಂದೇ ಗುರುತಿಸಿಕೊಂಡಿದ್ದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಕೂಡ ಸುಪ್ರೀಂ ನೀಡಿದ ತೀರ್ಪಿನ ಬಗ್ಗೆ ಮಾತನಾಡಿದ್ದಾರೆ. ಅವರ ಮುಂದಿನ ರಾಜಕೀಯ ನಡೆ ಏನು ಎಂಬುದರ ಬಗ್ಗೆ ಮುಕ್ತವಾಗಿ ಮಾತಜನಾಡಿದ್ದಾರೆ.