ಬಿಜೆಪಿ ನಾಯಕರನ್ನು ಕನಸಲ್ಲೂ ಕಾಡುವ ಆ ಮಹಾನಾಯಕನ ಮಹಾ ರಹಸ್ಯ!

Apr 17, 2022, 5:04 PM IST

ಬೆಂಗಳೂರು (ಏ. 17): ಈ ಹಿಂದೆ ನನ್ನ ವಿರುದ್ಧ ಸಿಡಿ ತಯಾರಿಸಿದ ಮಹಾನಾಯಕನ ತಂಡದಿಂದಲೇ ಸಚಿವ ಕೆ.ಎಸ್‌.ಈಶ್ವರಪ್ಪ (KS Eshwarappa) ವಿರುದ್ಧ  ಷಡ್ಯಂತ್ರ ರೂಪಿಸಲಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ (Ramesh Jarkiholi) ಸ್ಫೋಟಕ ಹೇಳಿಕೆ ನೀಡಿದ್ದಾರೆ. 

Asianet Suvarna Fucus:ಬ್ಯಾನ್ ಆಗುತ್ತಾ PFI? ನಿಷೇಧ ಮಾಡುವುದು ಅಷ್ಟು ಸುಲಭನಾ?

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ (Santosh Suicide Case)ವಿಚಾರದಲ್ಲಿ ಸಚಿವ ಈಶ್ವರಪ್ಪ (Eshwarappa) ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದ ಟೀಮ್‌ ಇದೀಗ ಈಶ್ವರಪ್ಪ ವಿರುದ್ಧ ಷಡ್ಯಂತ್ರ ಮಾಡಿದೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ (DK Shivakumar) ಮತ್ತು ಶಾಸಕಿ ಲಕ್ಷ್ಮೇ ಹೆಬ್ಬಾಳಕರ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಒಂದು ವರ್ಷದಿಂದ ನನ್ನನ್ನು ಷಡ್ಯಂತ್ರದಲ್ಲಿ ಸಿಲುಕಿಸಿದರು. ಅದನ್ನು ನಾನು ಎದುರಿಸಿದ್ದೇನೆ. ಕಾಂಗ್ರೆಸ್‌ ನಾಯಕರು ರಾಜಕೀಯ ಮಾಡಿದರು. ನನ್ನ ಹೆಸರನ್ನು ಎಳೆದು ತರಲಾಯಿತು. ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ ಅದೇ ಮಹಾನಾಯಕರೇ ಈಗ ಈಶ್ವರಪ್ಪ ಷಡ್ಯಂತ್ರ ರೂಪಿಸಿದ್ದಾರೆ ಎಂದು ಗಂಭೀರ ಆರೋಪಿಸಿದ್ದಾರೆ.