ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..? ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!

ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..? ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!

Published : Aug 21, 2023, 12:30 PM IST

ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..?
ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೈ ಮೇಲುಗೈ!

ರಾಮನಗರದಲ್ಲಿ ಏನೇ ಚುನಾವಣೆಗಳು ನಡೆದ್ರೂ ಕೂಡ ಅಲ್ಲಿ ಜೆಡಿಎಸ್ ಬಿಟ್ಟು ಇನ್ನೊಂದು ಪಕ್ಷ ಗೆಲುವಿನ ಕನಸು ಕಾಣೋದು ಕೂಡ ಕಷ್ಟವೇ ಆಗಿತ್ತು. ದಳಪತಿಗಳ ಭದ್ರವಾದ ಹಿಡಿತ ಕಾಂಗ್ರೆಸ್(Congress) ಹಾಗೂ ಬಿಜೆಪಿಗೆ (BJP) ಅಲ್ಲಿ ತಮ್ಮ ಬಾವುಟ ಹಾರಿಸದಂತೆ ನೋಡಿಕೊಂಡಿತ್ತು. ಆದ್ರೆ ಬದಲಾದ ರಾಜಕೀಯ ವಾತಾವರಣದಲ್ಲಿ ಜೆಡಿಎಸ್(JDS) ಹಂತ ಹಂತವಾಗಿ ತಮ್ಮ ಹಿಡಿತವನ್ನ ಕಳೆದುಕೊಳ್ತ ಇದೆ. ಇದಕ್ಕೆ ಸಾಕ್ಷಿಯಾಗಿದ್ದು ಗ್ರಾಮ ಪಂಚಾಯಿತಿ ಚುನಾವಣೆ. ರಾಮನಗರ ಜಿಲ್ಲೆಯಾದಾಗಿನಿಂದ ಜೆಡಿಎಸ್ ಭದ್ರಕೋಟೆ ಅಂತಲೇ ಹೆಸರುವಾಸಿಯಾಗಿತ್ತು. ಹೆಸರಿಗೆ ತಕ್ಕಂತೆ ಯಾರೂ ಭೇದಿಸದ ಬಲಿಷ್ಟವಾದ ಕೋಟೆಯೇ ಹೌದು. ದೊಡ್ಡ ಗೌಡರ ಕುಟುಂಬ ತಮ್ಮ ಪಾರುಪತ್ಯ ಮೆರೆದ ಜಿಲ್ಲೆ. ಯಾವುದೇ ಚುನಾವಣೆ ಆಗಲಿ, ರಾಮನಗರ ಅಂದ್ರೆ ಜಾತ್ಯಾತೀತ ಜನತಾದಳದ ಪಾಲಿಗೆ ಯಾವಾಗಲೂ ಸಿಹಿ ಸುದ್ದಿಯನ್ನೇ ಕೊಡ್ತಾ ಇತ್ತು. ವಿಧಾನಸಭಾ ರಾಜಕೀಯ ಇತಿಹಾಸವನ್ನ ನೋಡೋದಾದ್ರೆ, 1994ರ ತನಕ ರಾಮನಗರದಲ್ಲಿ(Ramanagar) ಕಾಂಗ್ರೆಸ್ ಪ್ರಾಬಲ್ಯವಿತ್ತು. ಆದ್ರೆ ಯಾವಾಗ ರಾಮನಗರದಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು 1994ರಲ್ಲಿ ಸ್ಪರ್ಧೆ ಮಾಡಿದ್ರೋ ಅಲ್ಲಿಂದ ರಾಮನಗರ ತೆನೆ ಹೊತ್ತ ಮಹಿಳೆಯ ಮಹಲ್ ಆಗಿ ಬಿಡ್ತು. 1999ರನ್ನ ಹೊರತು ಪಡೆಸಿ, 2004,2008,2013ರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸತತವಾಗಿ ಗೆಲ್ಲುತ್ತಲೇ ಬಂದರು. ಅದಾದ ಮೇಲೆ 2018ರಲ್ಲಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಕೂಡ ವಿಜೇತರಾಗಿ ಶಾಸಕಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more