ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..? ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!

ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..? ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!

Published : Aug 21, 2023, 12:30 PM IST

ರಾಮನಗರದಲ್ಲಿ ಹಿಡಿತ ಕಳೆದುಕೊಳ್ತಾ ಜೆಡಿಎಸ್..?
ದಳಪತಿಗಳ ಸಾಮ್ರಾಜ್ಯಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್..!
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೈ ಮೇಲುಗೈ!

ರಾಮನಗರದಲ್ಲಿ ಏನೇ ಚುನಾವಣೆಗಳು ನಡೆದ್ರೂ ಕೂಡ ಅಲ್ಲಿ ಜೆಡಿಎಸ್ ಬಿಟ್ಟು ಇನ್ನೊಂದು ಪಕ್ಷ ಗೆಲುವಿನ ಕನಸು ಕಾಣೋದು ಕೂಡ ಕಷ್ಟವೇ ಆಗಿತ್ತು. ದಳಪತಿಗಳ ಭದ್ರವಾದ ಹಿಡಿತ ಕಾಂಗ್ರೆಸ್(Congress) ಹಾಗೂ ಬಿಜೆಪಿಗೆ (BJP) ಅಲ್ಲಿ ತಮ್ಮ ಬಾವುಟ ಹಾರಿಸದಂತೆ ನೋಡಿಕೊಂಡಿತ್ತು. ಆದ್ರೆ ಬದಲಾದ ರಾಜಕೀಯ ವಾತಾವರಣದಲ್ಲಿ ಜೆಡಿಎಸ್(JDS) ಹಂತ ಹಂತವಾಗಿ ತಮ್ಮ ಹಿಡಿತವನ್ನ ಕಳೆದುಕೊಳ್ತ ಇದೆ. ಇದಕ್ಕೆ ಸಾಕ್ಷಿಯಾಗಿದ್ದು ಗ್ರಾಮ ಪಂಚಾಯಿತಿ ಚುನಾವಣೆ. ರಾಮನಗರ ಜಿಲ್ಲೆಯಾದಾಗಿನಿಂದ ಜೆಡಿಎಸ್ ಭದ್ರಕೋಟೆ ಅಂತಲೇ ಹೆಸರುವಾಸಿಯಾಗಿತ್ತು. ಹೆಸರಿಗೆ ತಕ್ಕಂತೆ ಯಾರೂ ಭೇದಿಸದ ಬಲಿಷ್ಟವಾದ ಕೋಟೆಯೇ ಹೌದು. ದೊಡ್ಡ ಗೌಡರ ಕುಟುಂಬ ತಮ್ಮ ಪಾರುಪತ್ಯ ಮೆರೆದ ಜಿಲ್ಲೆ. ಯಾವುದೇ ಚುನಾವಣೆ ಆಗಲಿ, ರಾಮನಗರ ಅಂದ್ರೆ ಜಾತ್ಯಾತೀತ ಜನತಾದಳದ ಪಾಲಿಗೆ ಯಾವಾಗಲೂ ಸಿಹಿ ಸುದ್ದಿಯನ್ನೇ ಕೊಡ್ತಾ ಇತ್ತು. ವಿಧಾನಸಭಾ ರಾಜಕೀಯ ಇತಿಹಾಸವನ್ನ ನೋಡೋದಾದ್ರೆ, 1994ರ ತನಕ ರಾಮನಗರದಲ್ಲಿ(Ramanagar) ಕಾಂಗ್ರೆಸ್ ಪ್ರಾಬಲ್ಯವಿತ್ತು. ಆದ್ರೆ ಯಾವಾಗ ರಾಮನಗರದಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು 1994ರಲ್ಲಿ ಸ್ಪರ್ಧೆ ಮಾಡಿದ್ರೋ ಅಲ್ಲಿಂದ ರಾಮನಗರ ತೆನೆ ಹೊತ್ತ ಮಹಿಳೆಯ ಮಹಲ್ ಆಗಿ ಬಿಡ್ತು. 1999ರನ್ನ ಹೊರತು ಪಡೆಸಿ, 2004,2008,2013ರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸತತವಾಗಿ ಗೆಲ್ಲುತ್ತಲೇ ಬಂದರು. ಅದಾದ ಮೇಲೆ 2018ರಲ್ಲಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಕೂಡ ವಿಜೇತರಾಗಿ ಶಾಸಕಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more