ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

ಕಾಂಗ್ರೆಸ್ ಆಕ್ರೋಶದ ಬೆನ್ನಲ್ಲೇ ಜಮೀರ್ ಟ್ವೀಟ್ ಡಿಲೀಟ್, ಅನ್ನ ಭಾಗ್ಯ ಯೋಜನೆಯಲ್ಲಿ ಟ್ವಿಸ್ಟ್!

Published : Jun 14, 2023, 11:49 PM IST

ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ, ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿದೆ. ಇತ್ತ ಹೊಂದಾಣಿಕೆ ರಾಜಕೀಯ ಆರೋಪದ ಬೆನ್ನಲ್ಲೇ ಹೊಸ ಬಾಂಬ್ ಬಿದ್ದಿದೆ.  ಬೊಮ್ಮಾಯಿ-ಶ್ಯಾಮನೂರು ರಹಸ್ಯ ಮಾತುಕತೆ ಫೋಟೋಗಳು ಬಹಿರಂಗವಾಗಿದೆ. ಹೊಂದಾಣಿಕೆ ರಾಜಕೀಯ ಮಾಡಿದರೆ ಹೆಸರು ಹೇಳಿ, ಪ್ರತಾಪ್ ಸಿಂಹಗೆ ಸಿದ್ದು ಸವಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ಎಂದು ಜಮೀರ್ ಅಹಮ್ಮದ್ ಖಾನ್ ಮಾಡಿರುವ ಟ್ವೀಟ್ ಇದೀಗ ಭಾರಿ ರಂಪಾಟ ಸೃಷ್ಟಿಸಿದೆ. ಜಮೀರ್ ಟ್ವೀಟ್‌ ಫೋಟೋದಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲ ಕಾಣಿಸಿಕೊಂಡಿದ್ದಾರೆ. ಇದು ವಿವಾದವಾಗಿದೆ. ಇತ್ತ ರಣದೀಪ್ ಸುರ್ಜೆವಾಲ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಜಮೀರ್ ಅಹಮ್ಮದ್ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ 10 ಕೆಜಿ ಉಚಿತ ಅಕ್ಕಿ ಯೋಜನೆಯಲ್ಲಿ ಟ್ವಿಸ್ಟ್ ಎದುರಾಗಿದೆ. ಅಕ್ಕಿ ನೀಡುವುದಾಗಿ ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ ಇದೀಗ ಆಗಲ್ಲ ಎಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಯೋಜನೆ ವಿಳಂಬವಾಗುವ ಸಾಧ್ಯತೆ ಇದೆ.ಜನರಿಗೆ ಅನ್ನ ಭಾಗ್ಯ ನೀಡಲು ಕಾಂಗ್ರೆಸ್ ಮೀನಾಮೇಶ ಎಣಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಇದೀಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಅಕ್ಕಿ ಸಿಗದಿದ್ದರೆ ಅದರ ದುಡ್ಡನ್ನು ಜನರ ಖಾತೆಗೆ ನೀಡಿ ಎಂದು ಬಿಜೆಪಿ ಟೀಕಿಸಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more