ಮಹಾರಾಷ್ಟ್ರ ದೋಸ್ತಿ ಸರ್ಕಾರ ವಿಸರ್ಜನೆ? ಬಂಡಾಯ ಶಾಸಕರಿಗೆ ಠಾಕ್ರೆ ಶಾಕ್

Jun 22, 2022, 4:34 PM IST

ಮುಂಬೈ, (ಜೂನ್.22): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದು, ಮಹಾ ಸರ್ಕಾರ ಪತಮವಾಗುತ್ತೋ ಅಥವಾ ವಿಸರ್ಜನೆಯಾಗುತ್ತೋ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು, ಇಂದೇ ರಾಜೀನಾಮೆ ಕೊಡ್ತಾರಾ ಉದ್ಧವ್ ಠಾಕ್ರೆ!

 ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಗೊಳ್ಳುವ ಸುಳಿವನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬುಧವಾರ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಂಜಯ್ ರಾವತ್ ಅವರು, ಪ್ರಸ್ತುತದ ಮಹಾರಾಷ್ಟ್ರ ರಾಜ್ಯದ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಂಡಾಯ ಶಾಸಕರಿಗೆ ಠಾಕ್ರೆ ಶಾಕ್ ಕೊಡಲು ಮುಂದಾಗಿದ್ದಾರೆ.