ಸಿಎಂ ಹುಕುಂ.. ಡಿಸಿಎಂ ಡಿಶುಂ ಡಿಶುಂ.. ಕಾಂಗ್ರೆಸ್‌ನಲ್ಲಿ ಏನಾಗ್ತಿದೆ..?

ಸಿಎಂ ಹುಕುಂ.. ಡಿಸಿಎಂ ಡಿಶುಂ ಡಿಶುಂ.. ಕಾಂಗ್ರೆಸ್‌ನಲ್ಲಿ ಏನಾಗ್ತಿದೆ..?

Published : Sep 24, 2023, 03:50 PM IST

ಕೈ ಕೋಟೆಯಲ್ಲಿ ಬಣ ಯುದ್ಧ..ಬಲ ಯುದ್ಧ..!
3 ಡಿಸಿಎಂ ಆಯ್ತು.. ಈಗ 6 ಡಿಸಿಎಂ ಕಿಚ್ಚು..!
ಡಿಸಿಎಂ ಡಿಕೆಶಿ ಸಿಎಂ ಆಗ್ಬೇಕು ಎಂದ ಕೈ ಶಾಸಕ..!
 

ಸಿದ್ದರಾಮಯ್ಯ ಸರ್ಕಾರಕ್ಕೆ ಇನ್ನೂ ಮೂವರು ಡಿಸಿಎಂಗಳು  ಬೇಕು ಅಂದ್ರು ಸಚಿವ ಕೆ.ಎನ್ ರಾಜಣ್ಣ, ಮೂರೇಕೆ ಆರು ಡಿಸಿಎಂಗಳಿರಲಿ ಅಂದ್ರು ರೆಬೆಲ್ ರಾಯರೆಡ್ಡಿ. ಡಿಕೆಶಿ ಮುಖ್ಯಮಂತ್ರಿಯಾಗ್ಲಿ ಅಂದ್ರು ಡಿಕೆ ಆಪ್ತ ಶಾಸಕ. ಕಾಂಗ್ರೆಸ್‌ನಲ್ಲಿ(Congress) ಜೋರಾಯ್ತು ಬಣ ರಾಜಕೀಯ. ಸಿದ್ದರಾಮಯ್ಯ(Siddaramaiah) ಬಣದ ವಿರುದ್ಧ ಸಿಡಿದೆದ್ದ ಡಿಕೆ ಟೀಮ್. ಅಧಿಕಾರದಲ್ಲಿರ್ಲಿ, ಇಲ್ದೇ ಇರ್ಲಿ.. ಕಾಂಗ್ರೆಸ್‌ನಲ್ಲಿ ಒಂದು ವಿಷ್ಯ ತುಂಬಾ ಕಾಮನ್. ಅದೇ ಬಣಯುದ್ಧ, ಅಂತರ್ಯುದ್ಧ. ಬಣ ರಾಜಕಾರಣಕ್ಕೂ ಕಾಂಗ್ರೆಸ್‌ಗೂ ಬಿಡದ ನಂಟು. ಕೈ ಪಾಳೆಯದಲ್ಲಿ ಬಣ ಬಡಿದಾಟ ಶುರುವಾಗೋಕೆ ಒಂದು ಸಣ್ಣ ಕಿಡಿ ಸಾಕು. ಅಂಥದ್ದೇ ಒಂದು ಕಿಡಿ ಹೊತ್ತಿಕೊಂಡದ್ದೇ ತಡ.. ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ತಿಕ್ಕಾಟ ಶುರುವಾಗಿದೆ. ಅದು ಎಲ್ಲಿಗೆ ಬಂದು ನಿಂತಿದೆ ಗೊತ್ತಾ ವೀಕ್ಷಕರೇ.. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಪಟ್ಟದಲ್ಲಿ ಕೂತಿರೋವಾಗ್ಲೇ, ಡಿಕೆ ಶಿವಕುಮಾರ್(DK Shivakumar) ಸಿಎಂ ಆಗ್ಲೇಬೇಕು ಅಂತ ಸ್ವತಃ ಕಾಂಗ್ರೆಸ್ ಶಾಸಕರೊಬ್ಬರು ಹಕ್ಕೊತ್ತಾಯ ಮಾಡೋವರೆಗೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗ್ಬೇಕು ಅಂದಿರೋರು ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್(MLA Shivaganga Basavaraj). ಕೆ.ಎನ್ ರಾಜಣ್ಣನವರ ಈ ವೈಯಕ್ತಿಕ ಅಭಿಪ್ರಾಯವೇ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ನಾಂದಿ ಹಾಡಿರೋದು. ಸಿದ್ದರಾಮಯ್ಯ ಬಣದವರು ಸ್ಫೋಟಿಸಿದ ಈ ಡಿಸಿಎಂ (DCM)ಬಾಂಬ್, ಕಾಂಗ್ರೆಸ್ ಪಾಳೆಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಠಿಸಿ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಹಾಲಾಶ್ರೀ ಮೇಲೆ ಮತ್ತೊಂದು ಕೋಟಿ ಆರೋಪ..! ಮೂರುವರೆ ಕೋಟಿಯಲ್ಲಿ ಏನೇನು ಮಾಡಿದ್ಲು ಚೈತ್ರಾ..?

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more