ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರಾಭವಗೊಂಡಿದ್ದಾರೆ. ಫಲಿತಾಂಶದ ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ.
ಬೆಂಗಳೂರು (ನ. 11): ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರಾಭವಗೊಂಡಿದ್ದಾರೆ. ಫಲಿತಾಂಶದ ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ.
'ಜನಾದೇಶಕ್ಕೆ ಗೌರವ ಕೊಡುವುದು ಎಲ್ಲರ ಕರ್ತವ್ಯ. ಹಾಗೆ ನಿಮ್ಮ ಜನಾದೇಶಕ್ಕೆ ನಾನು ತಲೆಬಾಗುತ್ತೇನೆ. ಜೀವನದಲ್ಲಿ ಸೋತು ಗೆದ್ದವಳು ನಾನು. ಈ ಚುನಾವಣೆಯಲ್ಲಿ ನಾನು ಸೋತಿರಬಹುದು. ಅದರೆ ನಾಳೆ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ' ಎಂದು ಕುಸುಮಾ ಹೇಳಿದ್ದಾರೆ.
'ಬಹಳ ಕಡಿಮೆ ಸಮಯದಲ್ಲಿ, ಪ್ರಚಾರಕ್ಕಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ, ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನಿಮ್ಮ ಹೋರಾಟಗಳಲ್ಲಿ ನಾನು ಭಾಗಿಯಾಗುತ್ತೇನೆ' ಎಂದಿದ್ದಾರೆ.