ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

Published : May 31, 2022, 11:22 AM IST

ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಮುಖಂಡ ಲೆಹರ್‌ಸಿಂಗ್‌ ಸಿರೋಯ ಅವರನ್ನು ಘೋಷಿಸಿದ್ದು, ಕಣ ರಂಗೇರಿದಂತಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಎರಡು ಸ್ಥಾನಗಳು ನಿರಾಯಾಸವಾಗಿ ಲಭಿಸುವುದರಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಚಿತ್ರನಟ ಜಗ್ಗೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಭಾನುವಾರವೇ ಘೋಷಿಸಿತ್ತು. ಇದೀಗ ಮೂರನೇ ಸ್ಥಾನವನ್ನೂ ಗೆಲ್ಲುವ ಕಸರತ್ತು ನಡೆಸಲು ಮುಂದಾಗಿದೆ. ಬಿಜೆಪಿಯ ಮೂವರೂ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು, (ಮೇ.31): ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಮುಖಂಡ ಲೆಹರ್‌ಸಿಂಗ್‌ ಸಿರೋಯ ಅವರನ್ನು ಘೋಷಿಸಿದ್ದು, ಕಣ ರಂಗೇರಿದಂತಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಎರಡು ಸ್ಥಾನಗಳು ನಿರಾಯಾಸವಾಗಿ ಲಭಿಸುವುದರಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಚಿತ್ರನಟ ಜಗ್ಗೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಭಾನುವಾರವೇ ಘೋಷಿಸಿತ್ತು. ಇದೀಗ ಮೂರನೇ ಸ್ಥಾನವನ್ನೂ ಗೆಲ್ಲುವ ಕಸರತ್ತು ನಡೆಸಲು ಮುಂದಾಗಿದೆ. ಬಿಜೆಪಿಯ ಮೂವರೂ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಒಂದು ಸ್ಥಾನವನ್ನು ಸುಲಭವಾಗಿ ಜಯಿಸಲಿವೆ. ನಾಲ್ಕನೇ ಸ್ಥಾನ ಗೆಲ್ಲಲು ಇತರ ಪಕ್ಷದ ಮತಗಳ ಬೆಂಬಲ ಅಗತ್ಯವಾಗಲಿದೆ. ಅಗತ್ಯ ಮತಗಳ ಬಲ ಇಲ್ಲದಿದ್ದರೂ ಕಾಂಗ್ರೆಸ್‌ ಪಕ್ಷ ಸೋಮವಾರಷ್ಟೇ ತನ್ನ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿತ್ತು. ಮಂಗಳವಾರ ಜೆಡಿಎಸ್‌ ಕೂಡ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಲಿದೆ. ಇದೀಗ ಬಿಜೆಪಿ ಅಭ್ಯರ್ಥಿ ಕೂಡ ಅಖಾಡ ಪ್ರವೇಶಿಸಲಿದ್ದಾರೆ. ಅಲ್ಲಿಗೆ ನಾಲ್ಕನೇ ಸ್ಥಾನಕ್ಕೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕಿಳಿದಂತಾಗಲಿದ್ದು, ಯಾರು ಯಾವ ಪಕ್ಷದ ಮತಗಳನ್ನು ಸೆಳೆಯಲಿದ್ದಾರೆ ಎಂಬುದು ಕುತೂಹಲಕರವಾಗಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more