ಚಿಂತನ ಸಭೆಯಲ್ಲಿ ಹಿರಿಯ ನಾಯಕರು ಗರಂ: ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಾ ಬಿಜೆಪಿ?

ಚಿಂತನ ಸಭೆಯಲ್ಲಿ ಹಿರಿಯ ನಾಯಕರು ಗರಂ: ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಾ ಬಿಜೆಪಿ?

Published : Jul 17, 2022, 07:45 PM ISTUpdated : Jul 17, 2022, 07:46 PM IST

BJP Chintana Manthana Shibira Bengaluru: ಶುಕ್ರವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿರುವ ಖಾಸಗಿ ಹೊಟೆಲವೊಂದರಲ್ಲಿ ಬಿಜೆಪಿ ಚಿಂತನ ಮಂಥನ  ಆಯೋಜಿಸಲಾಗಿತ್ತು

ಬೆಂಗಳೂರು (ಜು. 17): ಕರ್ನಾಟಕದಲ್ಲಿ 2023ರ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕಾಂಗ್ರೆಸ್ (KPCC) ಸಾಲು ಸಾಲು ಪ್ರತಿಭಟನೆಗಳನ್ನ ಮಾಡಿಕೊಂಡು ಮುಂದಿನ ಬಾರಿ ಅಧಿಕಾರಕ್ಕೆ ಬರುವ ಆಲೋಚನೆಯಲ್ಲಿ ಇದ್ದರೆ ಇನ್ನೊಂದು ಕಡೆಯಲ್ಲಿ ಜನತಾದಳ (JDS) ಮಿಷನ್ 123 ಟಾರ್ಗೆಟ್ ಹಾಕಿಕೊಂಡು ಮತ್ತೆ ಕರ್ನಾಟಕವನ್ನ ಆಳುವ ಆಲೋಚನೆಯಲ್ಲಿದೆ. ಬಿಜೆಪಿ (BJP) ಕೂಡ ತಯಾರಿಯಲ್ಲಿ ಹಿಂದೆ ಬಿದ್ದಿಲ್ಲಾ. ಪಕ್ಷದಲ್ಲಿ ಮೀಟಿಂಗ್​ಗಳನ್ನ ಮಾಡಿಕೊಂಡು ಇರುವ ಅಧಿಕಾರವನ್ನ ಉಳಿಸಿಕೊಳ್ಳೋಕೆ ಪ್ಲ್ಯಾನ್‌ ಮಾಡುತ್ತಿದೆ. 

ಕರ್ನಾಟಕದಲ್ಲಿ ಮುಂದಿನ ವರ್ಷ ಅಂದ್ರೆ 2023ರಲ್ಲಿ ಚುನಾವಣಾ ಸಮರ (Assembly Election 2023) ಕಾವು ಜೋರಾಗಲಿದೆ. ಅದರ ಸೂಚನೆ ಈಗಲೇ ಸಿಗೋಕೆ ಶುರುವಾಗಿದೆ. ಎಲ್ಲಾ ಪಕ್ಷಗಳೂ ಅವುಗಳ ತಯಾರಿಯಲ್ಲಿ ನಿರತವಾಗಿವೆ. ಬಿಜೆಪಿಯಲ್ಲಿ ಮುಂದಿನ ಚುನಾವಣೆ ತಯಾರಿಗೆ ಈಗಿನಿಂದಲೇ ಕಾರ್ಯತಂತ್ರ ಶುರುವಾಗಿದೆ. ಅದರ ಪೂರ್ವಭಾವಿಯಾಗಿ ಚಿಂತನ ಸಭೆಯನ್ನ ಬಿಜೆಪಿ ಮಾಡಿಕೊಂಡಿದೆ.

ಇದನ್ನೂ ನೋಡಿ: 2023 ರ ಚುನಾವಣೆಗೆ ಜೆಡಿಎಸ್‌ ಭರ್ಜರಿ ಸಿದ್ಧತೆ: ಆನೇಕಲ್‌ ತಾಲೂಕಿನಲ್ಲಿ ದೂರುಡಬ್ಬಿ!

ಇಷ್ಟು ದಿನಗಳ ಕಾಲ ಕರ್ನಾಟಕ ಬಿಜೆಪಿಯ ನಡೆ ನುಡಿ ನೋಡಿದ ಹಿರಿಯರು ಕಿರಿಯರಿಗೆ ಕ್ಲಾಸ್ ತಗೊಂಡಿದ್ದಾರೆ. ಮುಂದಿನ ಬಾರಿ ಗೆಲ್ಲೋಕೆ 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಬಿಜೆಪಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಸಮುದಾಯಗಳ ಮತ ಸೆಳೆಯಲು ಕಾರ್ಯತಂತ್ರ ರೂಪಿಸುತ್ತಿದೆ.

ಶುಕ್ರವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಂದಿಬೆಟ್ಟ ರಸ್ತೆಯಲ್ಲಿರುವ ಖಾಸಗಿ ಹೊಟೆಲವೊಂದರಲ್ಲಿ ಕೇಸರಿ ಕಲಿಗಳು ಸೇರಿದ್ದರು. ಬಿಜೆಪಿ ಚಿಂತನ ಮಂಥನ ಸಭೆಯಲ್ಲಿ ಅನೇಕ ಚರ್ಚೆಗಳು ನಡೆದವು. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮಾಡಬೇಕಾದ ಕಾರ್ಯತಂತ್ರಗಳ ಕುರಿತು ವಿವಿಧ ಆಯಾಮಗಳಲ್ಲಿ ಸುದೀರ್ಘ ಚರ್ಚೆಯಾಗಿದ್ದು, ಪ್ರಸ್ತುತ ಸರ್ಕಾರದ ಬಗ್ಗೆ ಸಾರ್ವಜನಿಕರಲ್ಲಿ ಇರುವ ಅಭಿಪ್ರಾಯ ಹಾಗೂ ಮತ್ತೆ ಅಧಿಕಾರಕ್ಕೆ ಬರಲು ಇರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more