ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

Published : Jun 29, 2024, 01:30 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದ್ದು, ಸಿದ್ದರಾಮಯ್ಯ(CM Siddaramaiah) ಬೆನ್ನಿಗೆ ಕಾಂಗ್ರೆಸ್ ಹಿರಿಯ ನಾಯಕ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಪರ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬ್ಯಾಟಿಂಗ್ ಮಾಡಿದ್ದಾರೆ. ಹೆಚ್ಚುವರಿ DCM ಕೇಳುವವರ ಮೇಲೆ ಹೈಕಮಾಂಡ್ ಕ್ರಮ ಆಗಲಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ. ಹಾದಿ ಬೀದಿಯಲ್ಲಿ ಮಾತಾಡುವವರ ವಿರುದ್ಧ ಶಿಸ್ತಿನ ಕ್ರಮ ಆಗಲಿ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಯುವ ಘಟಕದ ಅಧ್ಯಕ್ಷನಾಗಿ ಕೆಲಸ‌ ಮಾಡಿದ್ದೇನೆ. ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ. ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆ ಮಾಡಿ, ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಬೇಡಿ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ, ಡಿಸಿಎಂ ಸ್ಥಾನಕ್ಕಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?