ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತನಾಡಲು ಮಾರ್ಕೆಟ್ ಇಲ್ಲ: ಸಿಎಂ ಪರ ಆರ್.ವಿ. ದೇಶಪಾಂಡೆ ಬ್ಯಾಟ್

Published : Jun 29, 2024, 01:30 PM IST

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದ್ದು, ಸಿದ್ದರಾಮಯ್ಯ(CM Siddaramaiah) ಬೆನ್ನಿಗೆ ಕಾಂಗ್ರೆಸ್ ಹಿರಿಯ ನಾಯಕ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಪರ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬ್ಯಾಟಿಂಗ್ ಮಾಡಿದ್ದಾರೆ. ಹೆಚ್ಚುವರಿ DCM ಕೇಳುವವರ ಮೇಲೆ ಹೈಕಮಾಂಡ್ ಕ್ರಮ ಆಗಲಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಸಿಎಂ ಬದಲಾವಣೆ, ಡಿಸಿಎಂ ಚರ್ಚೆ ಬಗ್ಗೆ ಮಾತಾಡಲು ಮಾರ್ಕೆಟ್ ಇಲ್ಲ. ಹಾದಿ ಬೀದಿಯಲ್ಲಿ ಮಾತಾಡುವವರ ವಿರುದ್ಧ ಶಿಸ್ತಿನ ಕ್ರಮ ಆಗಲಿ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಯುವ ಘಟಕದ ಅಧ್ಯಕ್ಷನಾಗಿ ಕೆಲಸ‌ ಮಾಡಿದ್ದೇನೆ. ಮಾಧ್ಯಮದವರ ಮುಂದೆ ವಿನಾಕಾರಣ ಹೇಳಿಕೆ ನೀಡುವುದು ಸರಿಯಲ್ಲ. ಮಾಧ್ಯಮಗಳ ಮುಂದೆ ಮಾತನಾಡುವವರು ಎಚ್ಚರಿಕೆಯಿಂದ ಇರಬೇಕು. ಅನಾವಶ್ಯಕ ಚರ್ಚೆ ಮಾಡಿ, ನಿಮ್ಮ ಪಕ್ಷವನ್ನು ನೀವೆ ಹಾಳು ಮಾಡಬೇಡಿ. ಜನರ ಕಲ್ಯಾಣಕ್ಕಾಗಿ ಚರ್ಚೆ ನಡೆಸಿ, ಡಿಸಿಎಂ ಸ್ಥಾನಕ್ಕಲ್ಲ ಎಂದು ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!