DVS ಮುಂದಿನ ನಡೆ ಏನು..? ಪಕ್ಷಕ್ಕಾಗಿ ದುಡಿಯುತ್ತಾರಾ? ಮುನಿಸಿಕೊಳ್ತಾರಾ?

DVS ಮುಂದಿನ ನಡೆ ಏನು..? ಪಕ್ಷಕ್ಕಾಗಿ ದುಡಿಯುತ್ತಾರಾ? ಮುನಿಸಿಕೊಳ್ತಾರಾ?

Published : Nov 10, 2023, 03:30 PM IST

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ DV ಸದಾನಂದಗೌಡ 
ಸದಾನಂದ ಗೌಡ ನಿವೃತ್ತಿಯಿಂದ ಬಿಜೆಪಿ ಹಿರಿಯರಲ್ಲಿ ಹೆಚ್ಚಿದ ಆತಂಕ..? 
ಟಿಕೆಟ್ ಸಿಗೋದಿಲ್ಲವೆಂಬ ಕಾರಣಕ್ಕೆನೇ DV ಸದಾನಂದಗೌಡ ನಿವೃತ್ತಿ..? 
 

ರಾಜ್ಯ ಬಿಜೆಪಿ ಹಿರಿಯ ನಾಯಕ, ಸಂಸದ, ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆ ಸ್ಪರ್ಧಿಸೋದಿಲ್ಲವೆಂದು ಡಿಸಿ ಸದಾನಂದಗೌಡ ಹೇಳಿದ್ದಾರೆ. ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ, ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಮತ್ತು ಸದ್ಯ ಬಿಜೆಪಿ ಸಂಸದರಾಗಿರುವ, ಡಿ ವಿ ಸದಾನಂದ ಗೌಡ(DV Sadananda Gowda) ಅವ್ರು ಚುನಾವಣಾ ರಾಜಕೀಯಕ್ಕೆ(Electoral Politics) ನಿವೃತ್ತಿ ಘೋಷಿಸಿದ್ದಾರೆ. ಇನ್ನೇನು ಕಲವೇ ತಿಂಗಳಿನಲ್ಲಿ ಲೋಕಸಭೆ(Loksabha) ಎಲೆಕ್ಷನ್ ಬರಲಿದೆ. ಈ ಸಂದರ್ಭದಲ್ಲಿ ಹಾಲಿ ಸಂಸದರೊಬ್ಬರ ಚುನಾವಣಾ(Election) ನಿವೃತ್ತಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಸದಾನಂದ ಗೌಡ ಅವರು ರಾಜಕೀಯದಲ್ಲೇ 30 ವರ್ಷಗಳನ್ನು  ಕಳೆದಿದ್ದಾರೆ. ಈ ಮೂವತ್ತು ವರ್ಷಗಳ ಅವರ ರಾಜಕೀಯ ಜರ್ನಿಯಲ್ಲಿ ಹತ್ತು ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿದ್ದಾರೆ. ಅದರ ನಂತರ 20 ವರ್ಷಗಳ ಕಾಲ ಸಂಸದರಾಗಿದ್ದ ಸದಾನಂದ ಗೌಡ ಅವರು, ಒಂದು ವರ್ಷ ಮುಖ್ಯಮಂತ್ರಿಯಾಗಿದ್ದರು. ಹಾಗೆನೇ ಒಟ್ಟು ಏಳು ವರ್ಷಗಳ ಕಾಲ ಮೋದಿ ಅವರೊಟ್ಟಿಗೆ ಕೇಂದ್ರದಲ್ಲಿ ಮಂತ್ರಿಯಾಗಿದ್ದರು ಡಿವಿಎಸ್ ಇದಕ್ಕೂ ಮೊದಲು ನಾಲ್ಕು ವರ್ಷಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಇದು ಅವರ 30 ವರ್ಷಗಳ ರಾಜಕೀಯ ಜರ್ನಿ. ಇದೆಲ್ಲವನ್ನು ಹೇಳಿಕೊಂಡಿರುವ ಡಿವಿಎಸ್, ಇಲ್ಲಿವರೆಗೂ ಪಕ್ಷಎಲ್ಲವನ್ನೂ ಕೊಟ್ಟಿದೆ. ಇನ್ನೇನಿದ್ರು ಪಕ್ಷಕ್ಕಾಗಿ ದುಡಿಯೋ ಕೆಲಸ ಮಾಡುವೆ ಎಂದು ಹೇಳಿದ್ದಾರೆ. ಹಾಗೆನೇ ಪಕ್ಷ ಎಲ್ಲವನ್ನೂ ಕೊಟ್ಟ ಮೇಲೆ ಇನ್ನೂ ಹೆಚ್ಚಿನದ್ದನ್ನು ಆಸೆ ಪಡಬಾರದು, ಆ ಕಾರಣಕ್ಕಾಗಿ ಬೇರೆಯವರಿಗೆ ಅವಕಾಶ ಸಿಗಲೆಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಡಿವಿಎಸ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಅವಳಿಗಾಗಿ ಅವನು ಕಳೆದುಕೊಂಡಿದ್ದು ಲಕ್ಷ ಲಕ್ಷ..! ಸಾಯೋದಕ್ಕೂ ಮೊದಲು ಹನಿಟ್ರ್ಯಾಪ್ ಕಥೆ ಹೇಳಿದ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more