ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ  ಮತ್ತೊಂದು ಸ್ಫೋಟಕ ಹೇಳಿಕೆ

ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ ಮತ್ತೊಂದು ಸ್ಫೋಟಕ ಹೇಳಿಕೆ

Published : Jan 14, 2023, 04:32 PM IST

ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಮೇಲೆ ನಾನು ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದನು. ಆದರೆ, ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ.

ಬೆಂಗಳೂರು (ಜ.14): ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣವನ್ನು ನಾನು ಬಯಲಿಗೆ ಎಳೆಯದಿದ್ದರೆ ಬಿಜೆಪಿ ಸರ್ಕಾರ ಮುಚ್ಚಿ ಹಾಕುತ್ತಿತ್ತು. ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ಕಾಲದಲ್ಲಿ ನನ್ನ ಚೇಂಬರ್ ಗೆ ಬ್ರೋಕರ್ ಗಳು ಬರಲು ಅವಕಾಶ ಕೊಡುತ್ತಿರಲಿಲ್ಲ. ಈಗಿನ ಬಿಜೆಪಿ ಸರ್ಕಾರ ಬ್ರೋಕರ್ ಗಳಿಗೆ ಹೆಚ್ಚಿನ ಮಣೆ ಹಾಕಿದೆ. ನಾನು ಸುದ್ದಿಗೋಷ್ಠಿ ಮೂಲಕ ಸ್ಯಾಂಟ್ರೋ ರವಿಯ ಅಕ್ರಮಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಂತರ ಹಲವು ಪ್ರಕರಣಗಳು ದಾಖಲಾದವು. ಇದಾದ ನಂತರ ಪೊಲೀಸರು ಬಂಧನಕ್ಕೆ ಬಲೆ ಬೀಸಿದಾಗ ಸ್ಯಾಂಟ್ರೋ ರವಿ ನಾಪತ್ತೆಯಾಗಿ ಪೂನಾದಲ್ಲಿ ಅಡಗಿಕೊಂಡಿದ್ದನು. ಆದರೆ, ಪೂನಾದಿಂದ ಗುಜರಾತ್ ಗೆ ಯಾಕೆ ಕರೆಸ್ಕೊಂಡರು ಗೊತ್ತಿಲ್ಲ. ಅಲ್ಲಿ ಅವನಿಗೆ ಏನೇನು ಭರವಸೆ ಕೊಟ್ರು? ಇದೆಲ್ಲ ಹೊರಗೆ ಬರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!