ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ  ಮತ್ತೊಂದು ಸ್ಫೋಟಕ ಹೇಳಿಕೆ

ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ ಮತ್ತೊಂದು ಸ್ಫೋಟಕ ಹೇಳಿಕೆ

Published : Jan 14, 2023, 04:32 PM IST

ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಮೇಲೆ ನಾನು ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದನು. ಆದರೆ, ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ.

ಬೆಂಗಳೂರು (ಜ.14): ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣವನ್ನು ನಾನು ಬಯಲಿಗೆ ಎಳೆಯದಿದ್ದರೆ ಬಿಜೆಪಿ ಸರ್ಕಾರ ಮುಚ್ಚಿ ಹಾಕುತ್ತಿತ್ತು. ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ಕಾಲದಲ್ಲಿ ನನ್ನ ಚೇಂಬರ್ ಗೆ ಬ್ರೋಕರ್ ಗಳು ಬರಲು ಅವಕಾಶ ಕೊಡುತ್ತಿರಲಿಲ್ಲ. ಈಗಿನ ಬಿಜೆಪಿ ಸರ್ಕಾರ ಬ್ರೋಕರ್ ಗಳಿಗೆ ಹೆಚ್ಚಿನ ಮಣೆ ಹಾಕಿದೆ. ನಾನು ಸುದ್ದಿಗೋಷ್ಠಿ ಮೂಲಕ ಸ್ಯಾಂಟ್ರೋ ರವಿಯ ಅಕ್ರಮಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಂತರ ಹಲವು ಪ್ರಕರಣಗಳು ದಾಖಲಾದವು. ಇದಾದ ನಂತರ ಪೊಲೀಸರು ಬಂಧನಕ್ಕೆ ಬಲೆ ಬೀಸಿದಾಗ ಸ್ಯಾಂಟ್ರೋ ರವಿ ನಾಪತ್ತೆಯಾಗಿ ಪೂನಾದಲ್ಲಿ ಅಡಗಿಕೊಂಡಿದ್ದನು. ಆದರೆ, ಪೂನಾದಿಂದ ಗುಜರಾತ್ ಗೆ ಯಾಕೆ ಕರೆಸ್ಕೊಂಡರು ಗೊತ್ತಿಲ್ಲ. ಅಲ್ಲಿ ಅವನಿಗೆ ಏನೇನು ಭರವಸೆ ಕೊಟ್ರು? ಇದೆಲ್ಲ ಹೊರಗೆ ಬರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!