ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ  ಮತ್ತೊಂದು ಸ್ಫೋಟಕ ಹೇಳಿಕೆ

ಸ್ಯಾಂಟ್ರೋ ರವಿ ಪ್ರಕರಣ: ಎಚ್‌ಡಿಕೆ ಮತ್ತೊಂದು ಸ್ಫೋಟಕ ಹೇಳಿಕೆ

Published : Jan 14, 2023, 04:32 PM IST

ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಮೇಲೆ ನಾನು ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದನು. ಆದರೆ, ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ.

ಬೆಂಗಳೂರು (ಜ.14): ರಾಜ್ಯದಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಅತ್ಯಾಚಾರ, ಮಹಿಳೆಯರಿಗೆ ವಂಚನೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿ ಪ್ರಕರಣವನ್ನು ನಾನು ಬಯಲಿಗೆ ಎಳೆಯದಿದ್ದರೆ ಬಿಜೆಪಿ ಸರ್ಕಾರ ಮುಚ್ಚಿ ಹಾಕುತ್ತಿತ್ತು. ದೂರು ದಾಖಲಿಸಿದ ಮೇಲೆ ನಾಪತ್ತೆಯಾಗಿ ಪೂನಾದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಗುಜರಾತ್‌ಗೆ ಕರೆಸಿಕೊಂಡು, ಕೆಲವೊಂದು ಭರವಸೆ ಕೊಟ್ಟು ಪೊಲೀಸರ ಕೈಗೆ ಸಿಗುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ಕಾಲದಲ್ಲಿ ನನ್ನ ಚೇಂಬರ್ ಗೆ ಬ್ರೋಕರ್ ಗಳು ಬರಲು ಅವಕಾಶ ಕೊಡುತ್ತಿರಲಿಲ್ಲ. ಈಗಿನ ಬಿಜೆಪಿ ಸರ್ಕಾರ ಬ್ರೋಕರ್ ಗಳಿಗೆ ಹೆಚ್ಚಿನ ಮಣೆ ಹಾಕಿದೆ. ನಾನು ಸುದ್ದಿಗೋಷ್ಠಿ ಮೂಲಕ ಸ್ಯಾಂಟ್ರೋ ರವಿಯ ಅಕ್ರಮಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಂತರ ಹಲವು ಪ್ರಕರಣಗಳು ದಾಖಲಾದವು. ಇದಾದ ನಂತರ ಪೊಲೀಸರು ಬಂಧನಕ್ಕೆ ಬಲೆ ಬೀಸಿದಾಗ ಸ್ಯಾಂಟ್ರೋ ರವಿ ನಾಪತ್ತೆಯಾಗಿ ಪೂನಾದಲ್ಲಿ ಅಡಗಿಕೊಂಡಿದ್ದನು. ಆದರೆ, ಪೂನಾದಿಂದ ಗುಜರಾತ್ ಗೆ ಯಾಕೆ ಕರೆಸ್ಕೊಂಡರು ಗೊತ್ತಿಲ್ಲ. ಅಲ್ಲಿ ಅವನಿಗೆ ಏನೇನು ಭರವಸೆ ಕೊಟ್ರು? ಇದೆಲ್ಲ ಹೊರಗೆ ಬರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?