ಮತ್ತಷ್ಟು ಸಾಮ್ರಾಜ್ಯ ವಿಸ್ತರಣೆಗೆ ಮುಂದಾದ ಸತೀಶ್ ಜಾರಕಿಹೊಳಿ: ಪುತ್ರನನ್ನು ರಾಜಕೀಯಕ್ಕೆ ಕರೆತರಲು ಪ್ರಯತ್ನ

ಮತ್ತಷ್ಟು ಸಾಮ್ರಾಜ್ಯ ವಿಸ್ತರಣೆಗೆ ಮುಂದಾದ ಸತೀಶ್ ಜಾರಕಿಹೊಳಿ: ಪುತ್ರನನ್ನು ರಾಜಕೀಯಕ್ಕೆ ಕರೆತರಲು ಪ್ರಯತ್ನ

Published : Jul 02, 2024, 04:11 PM ISTUpdated : Jul 02, 2024, 04:12 PM IST

ಪುತ್ರ ರಾಹುಲ್‌ರನ್ನು ಕಣಕ್ಕಿಳಿಸಿ ವಿರೋಧಿಗಳನ್ನು ಹಣಿಯಲು ಸತೀಶ್ ಪ್ಲ್ಯಾನ್
ರಾಯಭಾಗ- ಕುಡಚಿ ಕ್ಷೇತ್ರದ ಅಳಗವಾಡಿಯಲ್ಲಿ ಮನೆ ಮಾಡಲು ನಿರ್ಧಾರ
ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ‌ಸಾಮ್ರಾಜ್ಯ ವಿಸ್ತರಣೆಗೆ ಸತೀಶ್ ‌ಪ್ಲ್ಯಾನ್!

ಮತ್ತಷ್ಟು ಸಾಮ್ರಾಜ್ಯ ವಿಸ್ತರಣೆಗೆ ಸಚಿವ ಸತೀಶ್ ಜಾರಕಿಹೊಳಿ(Satish Jarakiholi) ಅಣಿಯಾಗಿದ್ದಾರೆ. ಪುತ್ರಿ ಆಯ್ತು, ಈಗ ಪುತ್ರ ರಾಹುಲ್‌ ಜಾರಕಿಹೊಳಿಯನ್ನೂ (Rahul Jarakiholi) ರಾಜಕೀಯಕ್ಕೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಪುತ್ರಿಯನ್ನು ಸಂಸದೆ ಮಾಡುವಲ್ಲಿ ಸತೀಶ್‌ ಜಾರಕಿಹೊಳಿ ಸಕ್ಸಸ್ ಆಗಿದ್ದು, ಈಗ ಪುತ್ರನನ್ನು ವಿಧಾನಸಭೆಗೆ ಕರೆ ತರಲು ಈಗಿನಿಂದಲೇ ಪ್ಲ್ಯಾನ್ ಮಾಡಲಾಗುತ್ತಿದೆ. ರಾಜಕೀಯ (politics) ವಿರೋಧಿಗಳನ್ನು ಹಣಿಯಲು ಸತೀಶ್ ಜಾರಕಿಹೊಳಿ ಸಿದ್ಧತೆ ನಡೆಸುತ್ತಿದ್ದು, ಮಾವ-ಅಳಿಯನ‌ ಹಣಿಯಲು ಈಗಿನಿಂದಲೇ ಸತೀಶ್ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಶಾಸಕ ಮಹೇಂದ್ರ ತಮ್ಮಣ್ಣವರ, ಶಂಭು ಕಲ್ಲೋಳ್ಕರ್ ಟಾರ್ಗೆಟ್ ಮಾಡಿದ್ದು, ಸತೀಶ್ ಪುತ್ರಿ ವಿರುದ್ಧ ಪಕ್ಷೇತರ ಆಗಿ ಶಂಭು ಕಲ್ಲೋಳ್ಕರ್  ಕಣಕ್ಕಿಳಿದಿದ್ದರು. ಕುಡಚಿ- ರಾಯಭಾಗ ಕ್ಷೇತ್ರದಲ್ಲಿ ಸಂಘಟನೆಗೆ ಒತ್ತು ನೀಡಿರುವ ಸತೀಶ್ . ಸದ್ಯ ಎಸ್‌ಸಿ ಮೀಸಲಾಗಿರುವ ರಾಯಭಾಗ- ಕುಡಚಿ ವಿಧಾನಸಭೆ ಕ್ಷೇತ್ರಗಳು, 2028ರ ಚುನಾವಣೆಯಲ್ಲಿ ಒಂದು ಸಾಮಾನ್ಯ ಕ್ಷೇತ್ರವಾಗುವ ಸಾಧ್ಯತೆ ಇದೆ. ರಾಯಭಾಗ- ಕುಡಚಿ ಕ್ಷೇತ್ರದ ಅಳಗವಾಡಿಯಲ್ಲಿ ಮನೆ ಮಾಡಲು ನಿರ್ಧಾರ ಮಾಡಿದ್ದು, ಬೆಳಗಾವಿ ಲೋಕಸಭೆಯಲ್ಲಿ ಈಗಾಗಲೇ ಜಾರಕಿಹೊಳಿ ಕುಟುಂಬ ಹಿಡಿತ ಹೊಂದಿದೆ. 

ಇದನ್ನೂ ವೀಕ್ಷಿಸಿ:  ಉದ್ಯಮಿ ಶಿವಕಾಂತ ಸಾವಿಗೆ ಕಾರಣವಾಯಿತಾ ಮಾಟಮಂತ್ರ? ಇದರಿಂದಲೇ ಸಾವು ಎಂದು ಪತ್ನಿ ದೀಪಾ ಆರೋಪ!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!