ಇಲ್ಲಿ ಶಾಂತಿ ಸಂಧಾನ..ಅಲ್ಲಿ ಕ್ರಾಂತಿ ಸಂಘರ್ಷ..! ತೊಡೆ ತಟ್ಟಿದ ಹರಿಪ್ರಸಾದ್‌ಗೆ ಆಪ್ತನ ಮೂಲಕ ಟಕ್ಕರ್..!

ಇಲ್ಲಿ ಶಾಂತಿ ಸಂಧಾನ..ಅಲ್ಲಿ ಕ್ರಾಂತಿ ಸಂಘರ್ಷ..! ತೊಡೆ ತಟ್ಟಿದ ಹರಿಪ್ರಸಾದ್‌ಗೆ ಆಪ್ತನ ಮೂಲಕ ಟಕ್ಕರ್..!

Published : Oct 07, 2023, 02:44 PM IST

ಕಾಂಗ್ರೆಸ್‌ನಲ್ಲಿ ಇಬ್ಬರು ನಾಯಕರ ದಂಗೆ..ದಂಗಲ್..!
ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದಾರೆ ಶಾಮನೂರು..!
ಸಿದ್ದರಾಮಯ್ಯ ವಿರುದ್ಧ ಬಂಡೆದ್ದಿದ್ದಾರೆ ಹರಿಪ್ರಸಾದ್..!
ಸಿಡಿದೆದ್ದ ಶಾಮನೂರು ಕ್ರಾಂತಿಗೆ ಶಾಂತಿಯ ಮದ್ದು..!
ಬಂಡೆದ್ದ ಹರಿಪ್ರಸಾದ್ ಉರಿಗೆ  ಕ್ರಾಂತಿಯೇ ಗುದ್ದು..!

ಸಿದ್ದರಾಮಯ್ಯ ವಿರುದ್ಧ ದಂಗೆ ಎದ್ದಿದ್ದಾರೆ ಕಾಂಗ್ರೆಸ್‌ನ ಇಬ್ಬರು ನಾಯಕರು. ಬಂಡಾಯದ ಬೆಂಕಿ ಆರಿಸಲು ಸಿದ್ದು ಹೆಣೆದರು ಶಾಂತಿ-ಕ್ರಾಂತಿ ಮಂತ್ರ. ಒಬ್ಬರ ಜೊತೆ ಶಾಂತಿ, ಮತ್ತೊಬ್ಬರ ಜೊತೆ ಕ್ರಾಂತಿ. ಒಂದ್ಕಡೆ ಸಂಧಾನ, ಮತ್ತೊಂದು ಕಡೆ ಸಂಘರ್ಷ. ಕಾಂಗ್ರೆಸ್‌ನಲ್ಲಿ(Congress) ಇಬ್ಬರು ಹಿರಿಯ ನಾಯಕರ ದಂಗೆ.. ಬಂಡಾಯದ ದಂಗಲ್. ಅದೂ ಯಾರ ವಿರುದ್ಧ.. ಪ್ರಚಂಡ ಬಹುಮತದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ. ಅವರಲ್ಲಿ ಒಬ್ಬರು ದಾವಣಗೆರೆಯ ಧಣಿ ಬಿರುದಾಂಕಿತ ಶಾಮನೂರು ಶಿವಶಂಕರಪ್ಪ(Shamanur Shivashankarappa), ಇನ್ನೊಬ್ಬರು ಕಾಂಗ್ರೆಸ್'ನ ಸೀನಿಯರ್ ಲೀಡರ್ ಬಿ.ಕೆ ಹರಿಪ್ರಸಾದ್. ಈ ದಂಗೆಯನ್ನು ಮಟ್ಟ ಹಾಕೋದಕ್ಕೆ ಸಿದ್ದರಾಮಯ್ಯನವರು(Siddaramaiah) ಚಾಣಕ್ಯ ತಂತ್ರ ಹೆಣೆದಿದ್ದಾರೆ. ಆ ತಂತ್ರದ ಹೆಸರು ಶಾಂತಿ-ಕ್ರಾಂತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಸ್ ಲೀಡರೂ ಹೌದು, ಖಡಕ್ ಅಡ್ಮಿನಿಸ್ಟ್ರೇಟರೂ ಹೌದು.. ಅದೇ ರೀತಿ ರಾಜಕೀಯ ಚಾಣಕ್ಯನೂ ಹೌದು. ಅವ್ರಿಗೆ ಯಾರನ್ನು ಹೇಗೆ ಸಂಭಾಳಿಸ್ಬೇಕು, ಯಾರನ್ನು ಹೇಗೆ ಮಟ್ಟ ಹಾಕ್ಬೇಕು ಅನ್ನೋದು ಚೆನ್ನಾಗಿ ಗೊತ್ತು. ಅದ್ರಲ್ಲಿ ಪಂಟರ್ ಆಗಿರೋದ್ರಿಂದ್ಲೇ ಸಿದ್ದರಾಮಯ್ಯ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದು. ಸಿದ್ದರಾಮಯ್ಯ ಬುದ್ಧಿರಾಮಯ್ಯನೂ ಹೌದು, ತಂತ್ರರಾಮಯ್ಯನೂ ಹೌದು. ಅವ್ರ ರಾಜಕೀಯದಾಟ, ಆ ಆಟದಲ್ಲಿ ಉರುಳಿಸೋ ದಾಳಗಳು ಹೇಗಿರ್ತವೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಈ ಶಾಂತಿ-ಕ್ರಾಂತಿ ಮಂತ್ರ.

ಇದನ್ನೂ ವೀಕ್ಷಿಸಿ:  ನೇಪಾಳದಲ್ಲಿ ಭೂಕಂಪ! ಸಿಕ್ಕಿಂನಲ್ಲಿ ಪ್ರವಾಹ? ಜೀವ ಉಳಿಸೋರ ಪ್ರಾಣವೇ ಅಪಾಯದಲ್ಲಿ!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more