ಇಲ್ಲಿ ಶಾಂತಿ ಸಂಧಾನ..ಅಲ್ಲಿ ಕ್ರಾಂತಿ ಸಂಘರ್ಷ..! ತೊಡೆ ತಟ್ಟಿದ ಹರಿಪ್ರಸಾದ್‌ಗೆ ಆಪ್ತನ ಮೂಲಕ ಟಕ್ಕರ್..!

ಇಲ್ಲಿ ಶಾಂತಿ ಸಂಧಾನ..ಅಲ್ಲಿ ಕ್ರಾಂತಿ ಸಂಘರ್ಷ..! ತೊಡೆ ತಟ್ಟಿದ ಹರಿಪ್ರಸಾದ್‌ಗೆ ಆಪ್ತನ ಮೂಲಕ ಟಕ್ಕರ್..!

Published : Oct 07, 2023, 02:44 PM IST

ಕಾಂಗ್ರೆಸ್‌ನಲ್ಲಿ ಇಬ್ಬರು ನಾಯಕರ ದಂಗೆ..ದಂಗಲ್..!
ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದಾರೆ ಶಾಮನೂರು..!
ಸಿದ್ದರಾಮಯ್ಯ ವಿರುದ್ಧ ಬಂಡೆದ್ದಿದ್ದಾರೆ ಹರಿಪ್ರಸಾದ್..!
ಸಿಡಿದೆದ್ದ ಶಾಮನೂರು ಕ್ರಾಂತಿಗೆ ಶಾಂತಿಯ ಮದ್ದು..!
ಬಂಡೆದ್ದ ಹರಿಪ್ರಸಾದ್ ಉರಿಗೆ  ಕ್ರಾಂತಿಯೇ ಗುದ್ದು..!

ಸಿದ್ದರಾಮಯ್ಯ ವಿರುದ್ಧ ದಂಗೆ ಎದ್ದಿದ್ದಾರೆ ಕಾಂಗ್ರೆಸ್‌ನ ಇಬ್ಬರು ನಾಯಕರು. ಬಂಡಾಯದ ಬೆಂಕಿ ಆರಿಸಲು ಸಿದ್ದು ಹೆಣೆದರು ಶಾಂತಿ-ಕ್ರಾಂತಿ ಮಂತ್ರ. ಒಬ್ಬರ ಜೊತೆ ಶಾಂತಿ, ಮತ್ತೊಬ್ಬರ ಜೊತೆ ಕ್ರಾಂತಿ. ಒಂದ್ಕಡೆ ಸಂಧಾನ, ಮತ್ತೊಂದು ಕಡೆ ಸಂಘರ್ಷ. ಕಾಂಗ್ರೆಸ್‌ನಲ್ಲಿ(Congress) ಇಬ್ಬರು ಹಿರಿಯ ನಾಯಕರ ದಂಗೆ.. ಬಂಡಾಯದ ದಂಗಲ್. ಅದೂ ಯಾರ ವಿರುದ್ಧ.. ಪ್ರಚಂಡ ಬಹುಮತದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ. ಅವರಲ್ಲಿ ಒಬ್ಬರು ದಾವಣಗೆರೆಯ ಧಣಿ ಬಿರುದಾಂಕಿತ ಶಾಮನೂರು ಶಿವಶಂಕರಪ್ಪ(Shamanur Shivashankarappa), ಇನ್ನೊಬ್ಬರು ಕಾಂಗ್ರೆಸ್'ನ ಸೀನಿಯರ್ ಲೀಡರ್ ಬಿ.ಕೆ ಹರಿಪ್ರಸಾದ್. ಈ ದಂಗೆಯನ್ನು ಮಟ್ಟ ಹಾಕೋದಕ್ಕೆ ಸಿದ್ದರಾಮಯ್ಯನವರು(Siddaramaiah) ಚಾಣಕ್ಯ ತಂತ್ರ ಹೆಣೆದಿದ್ದಾರೆ. ಆ ತಂತ್ರದ ಹೆಸರು ಶಾಂತಿ-ಕ್ರಾಂತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಸ್ ಲೀಡರೂ ಹೌದು, ಖಡಕ್ ಅಡ್ಮಿನಿಸ್ಟ್ರೇಟರೂ ಹೌದು.. ಅದೇ ರೀತಿ ರಾಜಕೀಯ ಚಾಣಕ್ಯನೂ ಹೌದು. ಅವ್ರಿಗೆ ಯಾರನ್ನು ಹೇಗೆ ಸಂಭಾಳಿಸ್ಬೇಕು, ಯಾರನ್ನು ಹೇಗೆ ಮಟ್ಟ ಹಾಕ್ಬೇಕು ಅನ್ನೋದು ಚೆನ್ನಾಗಿ ಗೊತ್ತು. ಅದ್ರಲ್ಲಿ ಪಂಟರ್ ಆಗಿರೋದ್ರಿಂದ್ಲೇ ಸಿದ್ದರಾಮಯ್ಯ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದು. ಸಿದ್ದರಾಮಯ್ಯ ಬುದ್ಧಿರಾಮಯ್ಯನೂ ಹೌದು, ತಂತ್ರರಾಮಯ್ಯನೂ ಹೌದು. ಅವ್ರ ರಾಜಕೀಯದಾಟ, ಆ ಆಟದಲ್ಲಿ ಉರುಳಿಸೋ ದಾಳಗಳು ಹೇಗಿರ್ತವೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಈ ಶಾಂತಿ-ಕ್ರಾಂತಿ ಮಂತ್ರ.

ಇದನ್ನೂ ವೀಕ್ಷಿಸಿ:  ನೇಪಾಳದಲ್ಲಿ ಭೂಕಂಪ! ಸಿಕ್ಕಿಂನಲ್ಲಿ ಪ್ರವಾಹ? ಜೀವ ಉಳಿಸೋರ ಪ್ರಾಣವೇ ಅಪಾಯದಲ್ಲಿ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more