ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

Published : Apr 19, 2023, 04:26 PM ISTUpdated : Apr 19, 2023, 05:35 PM IST

ಉಮೇದುವಾರಿಕೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸಲ್ಲಿಕೆ
ನಾಮಪತ್ರ ಸಲ್ಲಿಸಿ ಮಾತನಾಡಿದ ವಿಜಯೇಂದ್ರ

ಶಿವಮೊಗ್ಗ: ಶಿಕಾರಿಪುರದಲ್ಲಿ ವಿಧಾನಸಭಾ ಚುನಾವಣಾ ರಣಕಣ ರಂಗೇರಿದ್ದು, ಬಿ.ವೈ. ವಿಜಯೇಂದ್ರ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಇದಕ್ಕೂ ಮೊದಲು ಅದ್ಧೂರಿ ರೋಡ್‌ ಶೋ ಮೂಲಕ ಶಕ್ತಿಪದರ್ಶನ ಮಾಡಿದರು. ಬಳಿಕ ಮಾತನಾಡಿದ ಅವರು, ಶಾಹಿ ಗಾರ್ಮೆಂಟ್‌ ಬಗ್ಗೆ ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ಇದರಿಂದ ನಾಲ್ಕರಿಂದ ಐದು ಸಾವಿರ ಮಹಿಳೆಯರಿಗೆ ಉದ್ಯೋಗ ಸಿಕ್ಕಿದೆ. ಹಾಗಾಗಿ ಈ ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸುತ್ತಿವೆ. ನಾನು ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚು ಗಮನಕೊಡುತ್ತೇನೆ. ವಿರೋಧ ಪಕ್ಷದವರು ಯಡಿಯೂರಪ್ಪ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಇವತ್ತು ರೈತರು ಬಗರ್‌ಹುಕುಂ ಜಾಗದಲ್ಲಿ ಸಾಗುವಳಿ ಮಾಡುತ್ತಾರೆ ಎಂದರೇ ಅದಕ್ಕೆ ಶಕ್ತಿ ನೀಡಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನರು. ಈಗ ಇದಕ್ಕೆ ಎರಡು ಮೂರು ತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಆದ್ರೆ ಮುಂದೆ ಕೇವಲ ಒಂದು ತಲೆಮಾರಿನ ದಾಖಲೆಗಳ ಮೂಲಕ ಸಾಗುವಳಿಗೆ ಅವಕಾಶ ನೀಡಲು ಕಾನೂನನ್ನು ತರುತ್ತೇವೆ. ಅಲ್ಲದೇ ಮಹಿಳಾ ಸಂಘಗಳಿಗೆ ಶಕ್ತಿಯನ್ನು ತುಂಬುವ ಕೆಲಸವನ್ನು ನಾನು ಪ್ರಮಾಣಿಕವಾಗಿ ಮಾಡುತ್ತೇನೆ. ಇವತ್ತು ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ. ಯಡಿಯೂರಪ್ಪನವರು ಈ ಕ್ಷೇತ್ರದ ಜನರನ್ನು ತಮ್ಮ ಕುಟುಂಬದಂತೆ ನೋಡಿಕೊಂಡು ಬಂದಿದ್ದಾರೆ. ನಾನು ಕೂಡ ಅದೇ ರೀತಿ ನೋಡುವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ವೀಕ್ಷಿಸಿ: ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more