ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

Published : Apr 19, 2023, 04:26 PM ISTUpdated : Apr 19, 2023, 05:35 PM IST

ಉಮೇದುವಾರಿಕೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸಲ್ಲಿಕೆ
ನಾಮಪತ್ರ ಸಲ್ಲಿಸಿ ಮಾತನಾಡಿದ ವಿಜಯೇಂದ್ರ

ಶಿವಮೊಗ್ಗ: ಶಿಕಾರಿಪುರದಲ್ಲಿ ವಿಧಾನಸಭಾ ಚುನಾವಣಾ ರಣಕಣ ರಂಗೇರಿದ್ದು, ಬಿ.ವೈ. ವಿಜಯೇಂದ್ರ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಇದಕ್ಕೂ ಮೊದಲು ಅದ್ಧೂರಿ ರೋಡ್‌ ಶೋ ಮೂಲಕ ಶಕ್ತಿಪದರ್ಶನ ಮಾಡಿದರು. ಬಳಿಕ ಮಾತನಾಡಿದ ಅವರು, ಶಾಹಿ ಗಾರ್ಮೆಂಟ್‌ ಬಗ್ಗೆ ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ಇದರಿಂದ ನಾಲ್ಕರಿಂದ ಐದು ಸಾವಿರ ಮಹಿಳೆಯರಿಗೆ ಉದ್ಯೋಗ ಸಿಕ್ಕಿದೆ. ಹಾಗಾಗಿ ಈ ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸುತ್ತಿವೆ. ನಾನು ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚು ಗಮನಕೊಡುತ್ತೇನೆ. ವಿರೋಧ ಪಕ್ಷದವರು ಯಡಿಯೂರಪ್ಪ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಇವತ್ತು ರೈತರು ಬಗರ್‌ಹುಕುಂ ಜಾಗದಲ್ಲಿ ಸಾಗುವಳಿ ಮಾಡುತ್ತಾರೆ ಎಂದರೇ ಅದಕ್ಕೆ ಶಕ್ತಿ ನೀಡಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನರು. ಈಗ ಇದಕ್ಕೆ ಎರಡು ಮೂರು ತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಆದ್ರೆ ಮುಂದೆ ಕೇವಲ ಒಂದು ತಲೆಮಾರಿನ ದಾಖಲೆಗಳ ಮೂಲಕ ಸಾಗುವಳಿಗೆ ಅವಕಾಶ ನೀಡಲು ಕಾನೂನನ್ನು ತರುತ್ತೇವೆ. ಅಲ್ಲದೇ ಮಹಿಳಾ ಸಂಘಗಳಿಗೆ ಶಕ್ತಿಯನ್ನು ತುಂಬುವ ಕೆಲಸವನ್ನು ನಾನು ಪ್ರಮಾಣಿಕವಾಗಿ ಮಾಡುತ್ತೇನೆ. ಇವತ್ತು ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ. ಯಡಿಯೂರಪ್ಪನವರು ಈ ಕ್ಷೇತ್ರದ ಜನರನ್ನು ತಮ್ಮ ಕುಟುಂಬದಂತೆ ನೋಡಿಕೊಂಡು ಬಂದಿದ್ದಾರೆ. ನಾನು ಕೂಡ ಅದೇ ರೀತಿ ನೋಡುವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ವೀಕ್ಷಿಸಿ: ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more