ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ: ವಿಜಯೇಂದ್ರ

Published : Apr 19, 2023, 04:26 PM ISTUpdated : Apr 19, 2023, 05:35 PM IST

ಉಮೇದುವಾರಿಕೆ ಸಲ್ಲಿಸಿದ ಬಿ.ವೈ. ವಿಜಯೇಂದ್ರ
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸಲ್ಲಿಕೆ
ನಾಮಪತ್ರ ಸಲ್ಲಿಸಿ ಮಾತನಾಡಿದ ವಿಜಯೇಂದ್ರ

ಶಿವಮೊಗ್ಗ: ಶಿಕಾರಿಪುರದಲ್ಲಿ ವಿಧಾನಸಭಾ ಚುನಾವಣಾ ರಣಕಣ ರಂಗೇರಿದ್ದು, ಬಿ.ವೈ. ವಿಜಯೇಂದ್ರ ಇಂದು ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಇದಕ್ಕೂ ಮೊದಲು ಅದ್ಧೂರಿ ರೋಡ್‌ ಶೋ ಮೂಲಕ ಶಕ್ತಿಪದರ್ಶನ ಮಾಡಿದರು. ಬಳಿಕ ಮಾತನಾಡಿದ ಅವರು, ಶಾಹಿ ಗಾರ್ಮೆಂಟ್‌ ಬಗ್ಗೆ ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ಇದರಿಂದ ನಾಲ್ಕರಿಂದ ಐದು ಸಾವಿರ ಮಹಿಳೆಯರಿಗೆ ಉದ್ಯೋಗ ಸಿಕ್ಕಿದೆ. ಹಾಗಾಗಿ ಈ ಕುಟುಂಬಗಳು ನೆಮ್ಮದಿಯಾಗಿ ಜೀವನ ನಡೆಸುತ್ತಿವೆ. ನಾನು ಉದ್ಯೋಗ ಸೃಷ್ಟಿ ಕಡೆಗೆ ಹೆಚ್ಚು ಗಮನಕೊಡುತ್ತೇನೆ. ವಿರೋಧ ಪಕ್ಷದವರು ಯಡಿಯೂರಪ್ಪ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಇವತ್ತು ರೈತರು ಬಗರ್‌ಹುಕುಂ ಜಾಗದಲ್ಲಿ ಸಾಗುವಳಿ ಮಾಡುತ್ತಾರೆ ಎಂದರೇ ಅದಕ್ಕೆ ಶಕ್ತಿ ನೀಡಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನರು. ಈಗ ಇದಕ್ಕೆ ಎರಡು ಮೂರು ತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಆದ್ರೆ ಮುಂದೆ ಕೇವಲ ಒಂದು ತಲೆಮಾರಿನ ದಾಖಲೆಗಳ ಮೂಲಕ ಸಾಗುವಳಿಗೆ ಅವಕಾಶ ನೀಡಲು ಕಾನೂನನ್ನು ತರುತ್ತೇವೆ. ಅಲ್ಲದೇ ಮಹಿಳಾ ಸಂಘಗಳಿಗೆ ಶಕ್ತಿಯನ್ನು ತುಂಬುವ ಕೆಲಸವನ್ನು ನಾನು ಪ್ರಮಾಣಿಕವಾಗಿ ಮಾಡುತ್ತೇನೆ. ಇವತ್ತು ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ. ಯಡಿಯೂರಪ್ಪನವರು ಈ ಕ್ಷೇತ್ರದ ಜನರನ್ನು ತಮ್ಮ ಕುಟುಂಬದಂತೆ ನೋಡಿಕೊಂಡು ಬಂದಿದ್ದಾರೆ. ನಾನು ಕೂಡ ಅದೇ ರೀತಿ ನೋಡುವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ವೀಕ್ಷಿಸಿ: ಯಾರೇ ಬರಲಿ ಜನ ತೀರ್ಮಾನ ಮಾಡ್ತಾರೆ: ಭರತ್‌ ಬೊಮ್ಮಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more